9:54 PM Friday20 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು