6:09 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು