6:10 PM Monday2 - February 2026
ಬ್ರೇಕಿಂಗ್ ನ್ಯೂಸ್
ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ…

ಇತ್ತೀಚಿನ ಸುದ್ದಿ

ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!!

06/08/2021, 15:19

ಬೆಂಗಳೂರು(reporterkarnataka.com)

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೋವಿಡ್ ನಿರ್ವಹಣೆ ಕುರಿತ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ.

ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯನ್ನು ಒಳಗೊಂಡ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪಾಸಿಟಿವಿಟಿ ರೇಟ್ ದರ ಆಧರಿಸಿ, ಕೆಲವು ನಿರ್ಧಾರ ಕೈಗೊಳ್ಳಲಾಗಿದೆ. ಮೊದಲನೆಯದಾಗಿ ಗಡಿ ಜಿಲ್ಲೆಗಳಲ್ಲಿ ಈಗ ಇರುವಂತ ನೈಟ್ ಕರ್ಪ್ಯೂವನ್ನು ವೀಕ್ ಎಂಡ್ ಕರ್ಪ್ಯೂ ಕೂಡ ಜಾರಿಗೊಳಿಸಲಾಗುತ್ತಿದೆ. ರಾಜ್ಯಾಧ್ಯಂತ ನೈಟ್ ಕರ್ಪ್ಯೂವನ್ನು ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ಜಾರಿಗೊಳಿಸಲಾಗಿದೆ ಎಂದರು.


ಇತ್ತೀಚಿನ ಸುದ್ದಿ

ಜಾಹೀರಾತು