6:08 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಹೊಸ ವರ್ಷ ಸ್ವಾಗತಕ್ಕೆ ಕಡಲನಗರಿ ಸಜ್ಜು: ಬೀಚ್ ಗಳಲ್ಲಿ ಜನಸಾಗರ, ಅಲ್ಲಲ್ಲಿ ವಿಶೇಷ ಕಾರ್ಯಕ್ರಮ, ದೇಗುಲ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ

31/12/2023, 22:08

ಮಂಗಳೂರು(reporterkarnataka.com): ಹೊಸ ವರ್ಷ 2024 ಬರಮಾಡಿಕೊಳ್ಳಲು ಕಡಲನಗರಿ ಮಂಗಳೂರು ಸಜ್ಜಾಗಿದೆ. ಜಾತಿ, ಧರ್ಮ, ಪ್ರಾಂತ್ಯ, ಭಾಷೆಯ ವೈರುಧ್ಯಗಳ ನಡುವೆ ತುಳುವರು ಹೊಸ ವರ್ಷಕ್ಕೆ ನಗುಮೊಗದಿಂದ ಸಿದ್ದರಾಗಿದ್ದಾರೆ.


ವರ್ಷದ ಕೊನೆಯ ದಿನ ಭಾನುವಾರ ಬಂದಿರುವುದರಿಂದ ಕರಾವಳಿಗರು ಫುಲ್ ಖುಷಿಯಲ್ಲಿದ್ದಾರೆ. ಜಿಲ್ಲೆಯ ಜನತೆ ಇಂದು ಬೆಳಗ್ಗೆಯೇ ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ, ಕಟೀಲು, ಪೊಳಲಿ ಮುಂತಾದ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಎಲ್ಲ ದೇಗುಲಗಳು ಇಂದು ಬೆಳಗ್ಗಿನಿಂದಲೇ ರಶ್ ಇತ್ತು. ಕಡಲನಗರಿಯ ಶರವು, ಮಂಗಳಾದೇವಿ. ಕುದ್ರೋಳಿ ದೇಗುಲಗಳಿಗೆ ಸಾಕಷ್ಟು ಜನರು ಧಾವಿಸಿ ದೇವರಿಗೆ ನಮಿಸಿ ಬಂದಿದ್ದಾರೆ.
ಸಂಜೆ 4 ಗಂಟೆ ಕಳೆಯುತ್ತಿದ್ದಂತೆ ಮಂಗಳೂರಿನ ಪಣಂಬೂರು ಬೀಚ್, ತಣ್ಣೀರು ಬಾವಿ ಬೀಚ್, ಉಳ್ಳಾಲ ಸೋಮೇಶ್ವರ ಬೀಚ್, ಸುರತ್ಕಲ್ ಎನ್ ಐಟಿಕೆ ಬೀಚ್, ಸಸಿಹಿತ್ಲು ಬೀಚ್ ಪ್ರವಾಸಿಗರಿಂದ ಮತ್ತು ವಿಹಾರಾರ್ಥಿಗಳಿಂದ ತುಂಬಿತ್ತು. ಪಣಂಬೂರು ಬೀಚ್ ನಲ್ಲಿ ಜನರ ಖುಷಿ ಕಳೆಗಟ್ಟಿತ್ತು. ಗಾಳಿಪಟ ಹಾರಾಟ, ಬೆಲೂನ್ ಹಾರಾಟ ನಡೆಯಿತು.



ದೇಗುಲಗಳ ಜತೆ ಚರ್ಚ್ ಗಳಲ್ಲಿ ವಿಶೇಷ ಸಾಮೂಹಿಕ ಪ್ರಾರ್ಥನೆ ನಡೆಯಿತು. ಮಂಗಳೂರಿನ ಮಿಲಾಗ್ರಿಸ್ ಚರ್ಚ್,ವೆಲೆಂನ್ಸಿಯ ದೇರೆಬೈಲ್ ಚರ್ಚ್, ರೊಸಾರಿಯೊ ಚರ್ಚ್, ಬಿಜೈ ಚರ್ಚ್, ಸೈಂಟ್ ಸೆಬಾಸ್ಟಿಯನ್ ಚರ್ಚ್ ಸೇರಿದಂತೆ ಎಲ್ಲ ಚರ್ಚ್ ಗಳಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಪ್ರಾರ್ಥನೆ ನೆರವೇರಿತು.

ಇತ್ತೀಚಿನ ಸುದ್ದಿ

ಜಾಹೀರಾತು