9:55 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ

02/01/2024, 11:35

ಟೊಕಿಯೊ(reporter Karnataka.com): ಜಪಾನ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದೆ.
ಭೂಕಂಪದಿಂದ ಈಗಲಾಗಲೇ ಡಜನಿಗೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.


ವಾಜಿಮಾ ಬಂದರು ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು. ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು