2:51 AM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ

02/01/2024, 11:35

ಟೊಕಿಯೊ(reporter Karnataka.com): ಜಪಾನ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದೆ.
ಭೂಕಂಪದಿಂದ ಈಗಲಾಗಲೇ ಡಜನಿಗೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.


ವಾಜಿಮಾ ಬಂದರು ಪ್ರದೇಶದಲ್ಲಿ 13 ಜನರು ಸಾವನ್ನಪ್ಪಿದ್ದಾರೆ. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು. ದೊಡ್ಡ ಸುನಾಮಿ ಅಲೆಗಳು ಅಪ್ಪಳಿಸಿದ ಕುರಿತು ವರದಿಯಾಗಿಲ್ಲ.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು