8:24 PM Saturday2 - August 2025
ಬ್ರೇಕಿಂಗ್ ನ್ಯೂಸ್
Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ…

ಇತ್ತೀಚಿನ ಸುದ್ದಿ

ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

02/01/2024, 19:40

ಸುರತ್ಕಲ್(reporterkarnataka.com): ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಮಂಗಳೂರು ಉತ್ತರ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಅವರು, “ಚುನಾವಣೆ ಸಂದರ್ಭದಲ್ಲಿ ನೀವು ನಿಮ್ಮ ಜವಾಬ್ದಾರಿಯನ್ನು ನೆನಪಿಟ್ಟುಕೊಂಡು ಮತ ನೀಡಿದ್ದೀರಿ. ಅದೇ ರೀತಿ ನಾನು ನನ್ನ ಜವಾಬ್ದಾರಿಯನ್ನು ಅರಿತು ಕ್ಷೇತ್ರದ ಕೆಲಸ ಮಾಡುತ್ತಾ ಬಂದಿದ್ದೇನೆ. ಮೊದಲ ಅವಧಿಯಲ್ಲಿ ಶಕ್ತಿ ಮೀರಿ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಎರಡನೇ ಅವಧಿಯಲ್ಲಿ ಸರಕಾರದಲ್ಲಿ ಅನುದಾನ ಕೊರತೆ ಇರುವ ಕಾರಣ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಆದರೂ ಸುರತ್ಕಲ್ ಭಾಗದಲ್ಲಿ ಅಭೂತಪೂರ್ವವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿರುವ ಆತ್ಮತೃಪ್ತಿ ಇದೆ. ಇದು ನಿಮ್ಮೆಲ್ಲರ ಸಹಕಾರದಿಂದ ಆಗಿದೆ” ಎಂದರು.
ಬಳಿಕ ಮಾತಾಡಿದ ಮೇಯರ್ ಸುಧೀರ್ ಶೆಟ್ಟಿ ಅವರು, “ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಷನ್ ಇಡೀ ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಶ್ಲಾಘನೀಯ ಕಾರ್ಯ ಮಾಡಿದೆ. ಇದು ಎಲ್ಲರಿಗೂ ಮಾದರಿ. ಮಂಗಳೂರು ಮಹಾನಗರ ಪಾಲಿಕೆ ಇಬ್ಬರು ಶಾಸಕರ ನಿಸ್ವಾರ್ಥ ಸೇವೆಯಿಂದ ಜನಾನುರಾಗಿ ಕೆಲಸ ಮಾಡುತ್ತಿದೆ. ಸರಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೊಂಡಿಯಾಗಿ ಇಲ್ಲಿನ ಸಂಘಟನೆ ಪ್ರಾಮಾಣಿಕ ಕೆಲಸವನ್ನು ಮಾಡಿದೆ. ಅದಕ್ಕಾಗಿ ಅಭಿನಂದನೆಗಳು” ಎಂದು ನುಡಿದರು.
ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ ರಮೇಶ್ ಅತಿಥಿಗಳನ್ನು ಸ್ವಾಗತಿಸಿದರು. ಪುಷ್ಪರಾಜ್ ಶೆಟ್ಟಿ ಕುಡುಂಬೂರು ಪ್ರಾಸ್ತಾವಿಕ ಮಾತನ್ನಾಡಿದರು.
ಸಮಾರಂಭದಲ್ಲಿ ಶಾಸಕ ಡಾ ವೈ ಭರತ್ ಶೆಟ್ಟಿ ಮತ್ತು ಗುತ್ತಿಗೆದಾರ ಸುಧಾಕರ ಎಸ್. ಪೂಂಜ ಅವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ತೆರಿಗೆ ಹಣಕಾಸು ನಿರ್ವಹಣೆ ಮತ್ತು ಅಫೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ, ಉಪಮೇಯರ್ ಸುನೀತಾ, ಕಾರ್ಪೋರೇಟರ್ ಗಳಾದ ನಯನಾ ಕೋಟ್ಯಾನ್, ಸರಿತಾ ಶಶಿಧರ್, ಶೋಭಾ ರಾಜೇಶ್, ಗುತ್ತಿಗೆದಾರ ಸುಧಾಕರ್ ಎಸ್. ಪೂಂಜಾ, ಬಂಟರ ಸಂಘ ಸುರತ್ಕಲ್ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಅಸೋಸಿಯೇಶನ್ ನ ಉಪಾದ್ಯಕ್ಷ ತಾರಾನಾಥ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ನರಸಿಂಹ ಸುವರ್ಣ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಪಿಡಬ್ಲ್ಯೂಡಿ ಇಂಜಿನಿಯರ್ ವಸಂತ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.
ರಾಜೇಶ್ವರಿ ಡಿ. ಶೆಟ್ಟಿ ಮತ್ತು ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸುಭಾಷಿತನಗರ ಅಸೋಸಿಯೇಶನ್ ನಿಂದ ಸ್ನೇಹ ಸಮ್ಮಿಲನ, ಸಾಧಕರಿಗೆ ಗೌರವ, ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು