6:08 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ

02/01/2024, 21:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದರು.


ನಂಜನಗೂಡು ನಗರದ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ನಡೆ ಮಾತನಾಡಿದ ಅವರು, ದೇವಾಲಯದ ಸಂಪ್ರದಾಯದಂತೆ ಅನಾದಿಕಾಲದಿಂದಲೂ ಹುಣ್ಣಿಮೆಯಂದು ಅಂಧಕಾಸುರನ ಸಂಹಾರ ನಡೆಯುತ್ತದೆ. ಅಂಧಾಕಾಸುರ ಸಂಹಾರದ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ, ನಂಜುಂಡೇಶ್ವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ನಂಜುಂಡೇಶ್ವರನ ವಿಗ್ರಹದ ಮೇಲೆ ಎಂಜಲು ನೀರು ಎರಚಿ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತಂದು 4 – 5 ದಿನ ಕಳೆದರು ಕಿಡಿಗೇಡಿಗಳನ್ನು ಬಂಧಿಸದೆ ಕಾಲ‌ಹರಣ ಮಾಡುತ್ತಿರುವ ಪೋಲಿಸ್ ಇಲಾಖೆ, ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರದ ಕ್ರಮವನ್ನು ಖಂಡಿಸಿ ನಂಜುಂಡೇಶ್ವರನ ಭಕ್ತರೆಲ್ಲ ಸೇರಿ ಜನವರಿ 4 ರ ಗುರುವಾರ ಸ್ವಯಂ ಪ್ರೇರಿತರವಾಗಿ ನಂಜನಗೂಡು ಬಂದ್ ಮಾಡುವ ಮೂಲಕ ಸರ್ಕಾರವನ್ನು ಎಚ್ಚರ ಮಾಡಬೇಕಾದ ಅನಿವಾರ್ಯತೆ ಬಂದಿದೆ.
ಅದಕ್ಕಾಗಿ ತಾವೆಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ದಕ್ಷಿಣ ಕಾಶಿಯ ನಂಜುಂಡೇಶ್ವರನಿಗೆ ಎಂಜಲು ಎರಚಿದವರ ಶಿಕ್ಷೆಗೆ ಈ ಮೂಲಕ ಆಗ್ರಹಿಸ ಬೇಕೆಂದು ಕೋರಿಕೊಳ್ಳುತ್ತೆವೆ ಎಂದು ಮನವಿ ಮಾಡಿದರು.
ಮಾಧ್ಯಮಗೋಷ್ಠಿಯಲ್ಲಿ ನಗರಸಭಾ ಸದಸ್ಯ ಕಪಿಲೇಶ್, ಖಾದಿ ಗ್ರಾಮೋದ್ಯೋಗ ನಿಗಮದ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು