2:38 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಗೆ ಯುವ ಬ್ರಿಗೇಡ್ ಕರೆ

02/01/2024, 21:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ನಂಜುಂಡೇಶ್ವರನಿಗೆ ಎಂಜಲು ನೀರು ಎರಚಿ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜ.4 ರಂದು ಸ್ವಯಂಪ್ರೇರಿತ ನಂಜನಗೂಡು ಬಂದ್ ಕರೆ ನೀಡಲಾಗಿದೆ ಎಂದು ಯುವ ಬ್ರಿಗೇಡ್ ಮುಖಂಡ ಗಿರೀಶ್ ಹೇಳಿದರು.


ನಂಜನಗೂಡು ನಗರದ ತಾಲ್ಲೂಕು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ನಡೆ ಮಾತನಾಡಿದ ಅವರು, ದೇವಾಲಯದ ಸಂಪ್ರದಾಯದಂತೆ ಅನಾದಿಕಾಲದಿಂದಲೂ ಹುಣ್ಣಿಮೆಯಂದು ಅಂಧಕಾಸುರನ ಸಂಹಾರ ನಡೆಯುತ್ತದೆ. ಅಂಧಾಕಾಸುರ ಸಂಹಾರದ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ, ನಂಜುಂಡೇಶ್ವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ನಂಜುಂಡೇಶ್ವರನ ವಿಗ್ರಹದ ಮೇಲೆ ಎಂಜಲು ನೀರು ಎರಚಿ ಕೋಟ್ಯಂತರ ಭಕ್ತರ ನಂಬಿಕೆ ಹಾಗೂ ಭಾವನೆಗಳಿಗೆ ಧಕ್ಕೆ ತಂದು 4 – 5 ದಿನ ಕಳೆದರು ಕಿಡಿಗೇಡಿಗಳನ್ನು ಬಂಧಿಸದೆ ಕಾಲ‌ಹರಣ ಮಾಡುತ್ತಿರುವ ಪೋಲಿಸ್ ಇಲಾಖೆ, ತಾಲ್ಲೂಕು ಆಡಳಿತ, ಜಿಲ್ಲಾಡಳಿತ, ಸರ್ಕಾರದ ಕ್ರಮವನ್ನು ಖಂಡಿಸಿ ನಂಜುಂಡೇಶ್ವರನ ಭಕ್ತರೆಲ್ಲ ಸೇರಿ ಜನವರಿ 4 ರ ಗುರುವಾರ ಸ್ವಯಂ ಪ್ರೇರಿತರವಾಗಿ ನಂಜನಗೂಡು ಬಂದ್ ಮಾಡುವ ಮೂಲಕ ಸರ್ಕಾರವನ್ನು ಎಚ್ಚರ ಮಾಡಬೇಕಾದ ಅನಿವಾರ್ಯತೆ ಬಂದಿದೆ.
ಅದಕ್ಕಾಗಿ ತಾವೆಲ್ಲರೂ ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ದಕ್ಷಿಣ ಕಾಶಿಯ ನಂಜುಂಡೇಶ್ವರನಿಗೆ ಎಂಜಲು ಎರಚಿದವರ ಶಿಕ್ಷೆಗೆ ಈ ಮೂಲಕ ಆಗ್ರಹಿಸ ಬೇಕೆಂದು ಕೋರಿಕೊಳ್ಳುತ್ತೆವೆ ಎಂದು ಮನವಿ ಮಾಡಿದರು.
ಮಾಧ್ಯಮಗೋಷ್ಠಿಯಲ್ಲಿ ನಗರಸಭಾ ಸದಸ್ಯ ಕಪಿಲೇಶ್, ಖಾದಿ ಗ್ರಾಮೋದ್ಯೋಗ ನಿಗಮದ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು