6:51 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಮನೆ ಹಂಚಿಕೆಯಲ್ಲಿ ಖಾನಾಪೂರ ಗ್ರಾಮಕ್ಕೆ ಮೋಸ: ಪ್ರಗತಿಪರ ದಲಿತ ಸಂಘಟನೆ ಆರೋಪ

02/01/2024, 23:00

ರಮೇಶ ಖಾನಾಪೂರ ರಾಯಚೂರು

info.reporterkarnataka@gmail.com

ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಹೊನ್ನಯ್ಯ ತಾತ ದೇವಸ್ಥಾನದ ಆವರಣದಲ್ಲಿ ನಡೆದ ಹೇಮನಾಳ ಗ್ರಾಮ ಪಂಚಾಯತಿಯ ಕೊನೆಯ ವಿವಿಧ ವಸತಿ ಯೋಜನೆ ಗ್ರಾಮ ಸಭೆಯಲ್ಲಿ ಹೇಮನಾಳ ಗ್ರಾಮ ಪಂಚಾಯತಿಗೆ ದೊಡ್ಡ ಗ್ರಾಮವಾದ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರವಾದ ಖಾನಾಪೂರ ಗ್ರಾಮಕ್ಕೆ ಅಂಬೇಡ್ಕರ್ ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಸಂಖ್ಯೆ ಅತಿ ಹೆಚ್ಚು ಇದ್ದಿದ್ದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ, ತಾ.ಪಂ ಅಧಿಕಾರಗಳು ಹಾಗೂ ಪಿಡಿಒ ಶಿವಕುಮಾರ ನಿರ್ಲಕ್ಷ್ಯದಿಂದ ಉದೇಶಪೂರ್ವಕವಾಗಿ ಅತಿ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರ ಹೊಂದಿರುವ
ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ, ಕಳೆದ ವಾರ ಖಾನಾಪೂರ ಗ್ರಾಮದಲ್ಲಿ ನಡೆದ ವಾರ್ಡ್ ಸಭೆಯಲ್ಲಿ ಖಾನಾಪೂರ ಗ್ರಾಮಕ್ಕೆ ಎಷ್ಟು ಮನೆಗಳು ಬಂದಿವೆ ಎಂಬುದು ಪಿಡಿಒ ಶಿವಕುಮಾರ ಅವರು ಗ್ರಾಮದ ಜನರಿಗೆ ತಿಳಿಸದೆ ಜನರಲ್ಲಿ ಮೂಖಾರ್ಜಿಗಳನ್ನು ಪಡೆದ ಎಷ್ಟು ಮನೆಗಳು ಎಂಬುದು ಮಾಹಿತಿ ನೀಡದೆ ಜನರಿಗೆ ದಿಕ್ಕು ತಪ್ಪಿಸಿ ಜನರಿಗೆ ಮೋಸ ಮಾಡಿದ್ದಾರೆ. ಕೂಡಲೇ ಸಂಬಂಧಿಸಿದ ಜಿಪಂ ಅಧಿಕಾರಿಗಳು ಹೆಚ್ಚೆತ್ತು ಕೊಂಡು ಈ ಗ್ರಾಮ ಸಭೆಯನ್ನು ರದ್ದು ಪಡಿಸಿ ಮರು ಗ್ರಾಮ ಸಭೆ ಮಾಡಿ ಖಾನಾಪೂರ ಗ್ರಾಮದ ಪರಿಶಿಷ್ಟ ಜಾತಿ ವರ್ಗಕ್ಕೆ ಸಿಗಬೇಕಾದ ನ್ಯಾಯ ಒದಗಿಸದ್ದಿದ್ದರೆ ತಾಪಂ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಡಲಾಗುತ್ತದೆ ಎಂದು ಖಾನಾಪೂರ ಗ್ರಾಮದ ದಲಿತ ಮುಖಂಡರು ಹಾಗೂ ಪ್ರಗತಿಪರ ದಲಿತ ಸಂಘಟನೆಯ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು