3:32 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮನೆ ಹಂಚಿಕೆಯಲ್ಲಿ ಖಾನಾಪೂರ ಗ್ರಾಮಕ್ಕೆ ಮೋಸ: ಪ್ರಗತಿಪರ ದಲಿತ ಸಂಘಟನೆ ಆರೋಪ

02/01/2024, 23:00

ರಮೇಶ ಖಾನಾಪೂರ ರಾಯಚೂರು

info.reporterkarnataka@gmail.com

ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ದೇವದುರ್ಗ ತಾಲ್ಲೂಕಿನ ಹೇಮನಾಳ ಗ್ರಾಮದ ಹೊನ್ನಯ್ಯ ತಾತ ದೇವಸ್ಥಾನದ ಆವರಣದಲ್ಲಿ ನಡೆದ ಹೇಮನಾಳ ಗ್ರಾಮ ಪಂಚಾಯತಿಯ ಕೊನೆಯ ವಿವಿಧ ವಸತಿ ಯೋಜನೆ ಗ್ರಾಮ ಸಭೆಯಲ್ಲಿ ಹೇಮನಾಳ ಗ್ರಾಮ ಪಂಚಾಯತಿಗೆ ದೊಡ್ಡ ಗ್ರಾಮವಾದ ಹಾಗೂ ತಾಲ್ಲೂಕು ಪಂಚಾಯತ ಕ್ಷೇತ್ರವಾದ ಖಾನಾಪೂರ ಗ್ರಾಮಕ್ಕೆ ಅಂಬೇಡ್ಕರ್ ವಸತಿ ಯೋಜನೆ ಮನೆ ಹಂಚಿಕೆಯಲ್ಲಿ ಅತಿ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಸಂಖ್ಯೆ ಅತಿ ಹೆಚ್ಚು ಇದ್ದಿದ್ದು ಎಲ್ಲಾ ಅಧಿಕಾರಿಗಳಿಗೆ ಗೊತ್ತಿದೆ, ತಾ.ಪಂ ಅಧಿಕಾರಗಳು ಹಾಗೂ ಪಿಡಿಒ ಶಿವಕುಮಾರ ನಿರ್ಲಕ್ಷ್ಯದಿಂದ ಉದೇಶಪೂರ್ವಕವಾಗಿ ಅತಿ ಹೆಚ್ಚು ಗ್ರಾಮ ಪಂಚಾಯತಿ ಸದಸ್ಯರ ಹೊಂದಿರುವ
ಖಾನಾಪೂರ ಗ್ರಾಮಕ್ಕೆ ಮನೆ ಹಂಚಿಕೆಯಲ್ಲಿ ಅವೈಜ್ಞಾನಿಕವಾಗಿ ಇಂದು ಅಧಿಕಾರಿಗಳು ಬೇಕಾಬಿಟ್ಟಿ ಆಯ್ಕೆ ಮಾಡಿ ಖಾನಾಪೂರ ಗ್ರಾಮಕ್ಕೆ ಸಾಮಾಜಿಕ ನ್ಯಾಯ ಕೊಡದೆ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ, ಕಳೆದ ವಾರ ಖಾನಾಪೂರ ಗ್ರಾಮದಲ್ಲಿ ನಡೆದ ವಾರ್ಡ್ ಸಭೆಯಲ್ಲಿ ಖಾನಾಪೂರ ಗ್ರಾಮಕ್ಕೆ ಎಷ್ಟು ಮನೆಗಳು ಬಂದಿವೆ ಎಂಬುದು ಪಿಡಿಒ ಶಿವಕುಮಾರ ಅವರು ಗ್ರಾಮದ ಜನರಿಗೆ ತಿಳಿಸದೆ ಜನರಲ್ಲಿ ಮೂಖಾರ್ಜಿಗಳನ್ನು ಪಡೆದ ಎಷ್ಟು ಮನೆಗಳು ಎಂಬುದು ಮಾಹಿತಿ ನೀಡದೆ ಜನರಿಗೆ ದಿಕ್ಕು ತಪ್ಪಿಸಿ ಜನರಿಗೆ ಮೋಸ ಮಾಡಿದ್ದಾರೆ. ಕೂಡಲೇ ಸಂಬಂಧಿಸಿದ ಜಿಪಂ ಅಧಿಕಾರಿಗಳು ಹೆಚ್ಚೆತ್ತು ಕೊಂಡು ಈ ಗ್ರಾಮ ಸಭೆಯನ್ನು ರದ್ದು ಪಡಿಸಿ ಮರು ಗ್ರಾಮ ಸಭೆ ಮಾಡಿ ಖಾನಾಪೂರ ಗ್ರಾಮದ ಪರಿಶಿಷ್ಟ ಜಾತಿ ವರ್ಗಕ್ಕೆ ಸಿಗಬೇಕಾದ ನ್ಯಾಯ ಒದಗಿಸದ್ದಿದ್ದರೆ ತಾಪಂ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಡಲಾಗುತ್ತದೆ ಎಂದು ಖಾನಾಪೂರ ಗ್ರಾಮದ ದಲಿತ ಮುಖಂಡರು ಹಾಗೂ ಪ್ರಗತಿಪರ ದಲಿತ ಸಂಘಟನೆಯ ವತಿಯಿಂದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು