9:14 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಜಪಾನ್ ಪ್ರಬಲ ಭೂಕಂಪ: 55ಕ್ಕೂ ಹೆಚ್ಚು ಸಾವು; 1 ಲಕ್ಷಕ್ಕೂ ಅಧಿಕ ಮಂದಿಯ ಸ್ಥಳಾಂತರ

03/01/2024, 11:13

ಟೊಕಿಯೊ(reporterkarnataka.com): ಜಪಾನ್​ನಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪಕ್ಕೆ 55ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ.
ಜಪಾನ್ ಭೂಕಂಪಕ್ಕೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಪ್ರಮುಖ ರಸ್ತೆಗಳು ಬಾಯಿ ಬಿಟ್ಟಿವೆ. ಆದರೆ ಅದೃಷ್ಟವಶಾತ್ ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ.
100ಕ್ಕೂ ಅಧಿಕ ಬಾರಿ ಭೂಮಿ ಕಂಪಸಿರುವುದರಿಂದ ಜನರು ಭಯಭೀತರಾಗಿದ್ದಾರೆ. ಜಪಾನಿನ ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಕಟ್ಟಡಗಳು ಉರುಳಿದ್ದವು, ರಸ್ತೆಗಳು ಬಿರುಕು ಬಿಟ್ಟವು. ಮೀನುಗಾರಿಕಾ ದೋಣಿಗಳು ಕೂಡ ಮುಳುಗಿಹೋಗಿವೆ.
ವಾಜಿಮಾ ಬಂದರು ಪ್ರದೇಶದಲ್ಲಿ ಆರಂಭದಲ್ಲೇ 13 ಜನರು ಸಾವನ್ನಪ್ಪಿದ್ದರು. ಪ್ರಬಲ ಭೂಕಂಪದಿಂದ ಕನಿಷ್ಠ 1.2 ಮೀಟರ್ ಎತ್ತರದ ಅಲೆಗಳು ಜಪಾನ್ ನ ವಾಜಿಮಾ ಬಂದರಿಗೆ ಅಪ್ಪಳಿಸಿತ್ತು.
2011ರಲ್ಲಿ ಭೂಕಂಪದ ನಂತರ ಸುನಾಮಿಯಿಂದಾಗಿ 16 ಸಾವಿರ ಮಂದಿ ಸಾವನ್ನಪ್ಪಿದ್ದರು. ಮಾರ್ಚ್ 2011 ರಲ್ಲಿ, 9 ತೀವ್ರತೆಯ ವಿನಾಶಕಾರಿ ಸುನಾಮಿ ಸಂಭವಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು