1:01 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಪಡೀಲ್: ಡ್ರಗ್ಸ್ ಸಹಿತ 1.92 ಲಕ್ಷ ಮೌಲ್ಯದ ಸೊತ್ತು ವಶ; ಇಬ್ಬರು ಆರೋಪಿಗಳ ಬಂಧನ

03/01/2024, 11:21

ಮಂಗಳೂರು(reporterkarnataka.com): ನಗರದ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ಮಾರಾಟ ಮಾಡುತ್ತಿದ್ದ ಆರೋಪ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಜಾಲ್ ನ ಯಾನೆ ಜುಟ್ಟು ಅಶ್ಪಾಕ(27) ಹಾಗೂ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಎಂದು ತಿಳಿದು ಬಂದಿದೆ.
ಆರೋಪಿಗಳು ಕಪ್ಪು ಬಣ್ಣದ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ಪೋಲಿಸ್ ನಿರೀಕ್ಷಕರು, ಪಿಎಸ್ಐ ಹಾಗೂ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿದ್ದರು. ಬಂಧಿತರಿಂದ
19 ಗ್ರಾಂ MDMA ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 1,92,800 ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳ ಪೈಕಿ ಜುಟ್ಟು ಅಶ್ಪಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಉಮ್ಮರ್ ಫಾರೂಕ್ ಇರ್ಫಾನ್ ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ, ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ, ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿತನ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ, ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು