2:27 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸೋಮೇಶ್ವರ: ಬ್ಯಾಂಕ್ ಆಫ್ ಬರೋಡಾ ವತಿಯಿಂದ ‘ಹಸಿರು ಪರಿಸರದ ಕಡೆ ನಮ್ಮ ನಡೆ’ ಗಿಡ ನೆಡುವ ಕಾರ್ಯಕ್ರಮ

03/01/2024, 11:41

ಮಂಗಳೂರು(reporterkarnataka.com): ಹಸಿರು ಜಗತ್ತು ಹಾಗೂ ಪ್ರಕಾಶಮಾನ ಭವಿಷ್ಯ ಎಂಬ ಗುರಿಯೊಂದಿಗೆ ಹಸಿರು ಪರಿಸರ ಸಂರಕ್ಷಣೆ ಮಾಡುವ ಕಾಳಜಿಯೊಂದಿಗೆ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಗಿಡಗಳ ನೆಡುವಿಕೆ ಹಾಗೂ ಸಂರಕ್ಷಣೆ ಕಾರ್ಯಕ್ರಮ ಸೋಮೇಶ್ವರದ ಪರಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.


ಬ್ಯಾಂಕ್ ಆಫ್ ಬರೋಡಾದ ಪ್ರಧಾನ ವ್ಯವಸ್ಥಾಪಕರು ಹಾಗೂ ವಲಯ ಮುಖ್ಯಸ್ಥರಾದ ಗಾಯತ್ರಿ ಆರ್. ಅವರು ಹಣ್ಣಿನ ಗಿಡಗಳನ್ನು ಹಸ್ತಾಂತರ ಮಾಡಿ, ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ಇದುವರೆಗೆ 3000ಕ್ಕೂ ಮಿಕ್ಕಿ ಗಿಡಗಳನ್ನು ಬ್ಯಾಂಕ್ ಆಫ್ ಬರೋಡಾ ವತಿಯಿಂದ ನೆಡಲಾಗಿದೆ.
ಮುಂದಿನ ಪೀಳಿಗೆಗೆ ಪರಿಸರ ರಕ್ಷಣೆ ಮಾಡಲು ಇಂಥ ಕಾರ್ಯಕ್ರಮ ಸಹಕಾರಿ, ಶಾಲಾ ವಿದ್ಯಾರ್ಥಿಗಳು ಹಣ್ಣಿನ ಗಿಡ ಸಂರಕ್ಷಣೆ ಮಾಡಿ ನಮ್ಮ ಮುಂದಿನ ಮಕ್ಕಳಿಗೆ ಹಣ್ಣು, ನೆರಳು ದೊರಕುವಂತೆ ಪರಿಸರ ರಕ್ಷಣೆ ಮಾಡಲು ಕರೆ ನೀಡಿದರು. ಜೊತೆಗೆ ಶಾಲಾ ವಿದ್ಯಾರ್ಥಿಗಳು BOB ಬ್ಯಾಂಕ್ ನಿಂದ BRO ಉಳಿತಾಯ ಖಾತೆ ತೆರೆದು ಮುಂದಿನ ದಿನಗಳಲ್ಲಿ ಶಿಕ್ಷಣ ಸಾಲ ಪಡೆದು ಹೆಚ್ಚಿನ ಪ್ರಗತಿ ಸಾಧಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳಾದ ಸತೀಶ್ ಪಾಠಕರ್, ಏಡ್ರಿಚ್ ಅಜಯ್ ಡಿಸೋಜಾ, ಸಂಜಯ್, ಸಚಿನ್ ಹೆಗ್ಡೆ, ಜೀವನ್ ಕೊಲ್ಯ, ಸಾರಸ್ವತ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಮಹೇಶ್ ಎಲ್. ಬೋಂಡಾಲ್, ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಕ್ರಂ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು