8:21 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಕೆರೆಗೆ ಹಾರವಾರ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ:  ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ

06/08/2021, 20:42

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಂಕುಸದೊಡ್ಡಿ ಗ್ರಾಮದ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕ ತಾನು ಕೆಲಸ ಮಾಡುತ್ತಿದ್ದ ಕೆರೆಗೆ ಆಹುತಿಯಾದ ದಾರುಣ ಘಟನೆ ನಡೆದಿದೆ. ಉದ್ಯೋಗ ಖಾತ್ರಿ ಕಾರ್ಮಿಕ ನಾಗೇಶ್(55)ಎಂಬವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ.

ಸಾನಬಾಳ ಕೆರೆಯ ಕೆಲಸ ಮಾಡಲು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಾಗೇಶ ಎನ್ನುವ ಅಂಕುಶದೊಡ್ಡಿ ಗ್ರಾಮದ ನಿವಾಸಿ ಎಂದಿನಂತೆ ಕೆಲಸಕ್ಕೆ ಹಾಜರಾಗಿದ್ದರು.

ಮಧ್ಯಾಹ್ನದವರೆಗೆ ಕೆಲಸ ಮಾಡಿದ್ದಾರೆ. ಹಾಜರಾತಿ ಹಾಕಿದ್ದಾರೆ.
ಕಾಮಗಾರಿ ಮುಗಿಸಿ ಕೆಲಸಕ್ಕೆ ಬಂದಿದ್ದ ಸುಮಾರು 800ಕ್ಕೂ ಅಧಿಕ ಕೂಲಿ ಕಾರ್ಮಿಕರು ಮನೆಗೆ ತೆರಳಿದ್ದಾರೆ. ಆದರೆ ಸಂಜೆಯಾದರೂ ನಾಗೇಶ್ ಅವರು ಮನೆಗೆ ಹೋಗದ ಕಾರಣ ಗಾಬರಿಗೊಂಡ ಕುಟುಂಬಸ್ಥರು ಮತ್ತೆ ಕೆಲಸದ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದ್ದಾರೆ. ಅದರೆ ಯಾವುದೇ ಸುಳಿವು ಸಿಗದ ಕಾರಣ ರಾತ್ರಿಯಿಡಿ ಎಲ್ಲಾ ಕಡೆಗೆ ಹುಡುಕಾಟ ನಡೆಸಿದ್ದಾರೆ. ಆದರೆ ಇಂದು ಸಾನಬಾಳ ಕೆರೆಯಲ್ಲಿ ನಾಗೇಶ ಅವರ ಶವ ನೀರಿನಲ್ಲಿ ತೇಲುವುದು ಪತ್ತೆಯಾಗಿದೆ. ಸ್ಥಳಕ್ಕೆ ಆಗಮಿಸಿ ಪತ್ನಿ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಘಟನಾ ಸ್ಥಳಕ್ಕೆ ಆಗಮಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಜೈ ವೀರೇಶ್ ಆರಕ್ಷಕ ಠಾಣೆಗೆ ದೂರು ದಾಖಲಿಸಿದ್ದಾರೆ .ಮಸ್ಕಿ ವಿಭಾಗದ ಪಿಎಸ್ಐ ಭೀಮ ದಾಸ್ ಧಾವಿಸಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಸ್ಕಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಬಂದ ಗಂಡ ಮನೆಗೆ ಬರಲಿಲ್ಲ.ನಮ್ಮ ಕುಟುಂಬಕ್ಕೆ ಆಧಾರವಾಗಿದ್ದ ಗಂಡ ಹೀಗೆ ಶವವಾಗಿ ಪತ್ತೆಯಾಗಿರುವುದು ಆಕಾಶ ಕಳಚಿದಂತಾಗಿದೆ .ನಾಲ್ಕು ಮಕ್ಕಳನ್ನು ನಾನೀಗ ಹೇಗೆ ಸಾಕಬೇಕೆಂದು ನಾಗೇಶ ಅವರ ಪತ್ನಿ ಕಣ್ಣೀರು ಹಾಕಿದರು.

ಅಭಿವೃದ್ಧಿ ಅಧಿಕಾರಿ ಸುರೇಶ್ ಪಾಟೀಲ್ ಮಾತನಾಡಿ, ದೂರು ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮುಂದಿನ ಪರಿಹಾರ ನೆರವು ಕಾರ್ಯಕ್ರಮಕ್ಕಾಗಿ ಯೋಚಿಸಲಾಗುವುದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು