9:35 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್

03/01/2024, 22:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸಾವಿತ್ರಿ ಬಾ ಪುಲೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಟ ನಡೆಸಿದ ಸಾವಿತ್ರಿ ಬಾ ಪುಲೆರವರು, ಇಂದಿಗೂ ಎಂದೆಂದಿಗೂ ಸ್ಪೂರ್ತಿದಾಯಕರಾದವರು ಎಂದು ಶಾಸಕರು ನುಡಿದರು.
ಕೂಡ್ಲಿಗಿ ಕ್ಷೇತ್ರದ  ಗುಣಮಟ್ಟದ ಶಿಕ್ಷಣಕ್ಕಾಗಿ,ಪ್ರತಿಯೊಬ್ಬರು ಪತ್ರ ಬರೆಯುವ ಮೂಲಕ  ಅನೇಕ ಸಲಹೆ ಮತ್ತು ಸೂಚನೆ ನೀಡುತ್ತಿರುವುದು ಸಂತಸ  ತಂದಿದೆ ಎಂದರು. 
ಸಾವಿತ್ರಿ ಬಾ ಪುಲೆ ಅವರ ಪ್ರಶಸ್ತಿಗೆ ಪಾತ್ರರಾಗಿರುವ ಗುರು ಮಾತೆಯರು ಹಾಗೂ ಶಿಕ್ಷಕಿಯರು, ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ  ಸೇವೆ ಸಲ್ಲಿಸುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಮತ್ತು ಅವರೆಲ್ಲರಿಗೂ ಶಾಸಕರು ಅಭಿನಂಧನೆಗಳನ್ನು ತಿಳಿಸಿದರು. ನಂತರ ಸಂಘದ  ಬೇಡಿಕೆಗಳನ್ನು ಆಲಿಸಿದ ಶಾಸಕರು, ಮುಂದಿನ ದಿನಮಾನಗಳಲ್ಲಿ ಅವೆಲ್ಲವುಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಗಣನೀಯ ಸೇವೆಸಲ್ಲಿಸಿದ ಹಾಗೂ ನಿವೃತ್ತ ಶಿಕ್ಷಕಿಯರನ್ನು, ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಹಶಿಲ್ದಾರರಾದ ಎಮ್.ರೇಣುಕಮ್ಮ ಸೇರಿದಂತೆ, ತಾಲೂಕು ಮಟ್ಟದ ವಿವಿದ ಇಲಾಖೆಗಳ ಅಧಿಕಾರಿಗಳು ಸಾವಿತ್ರಿ ಬಾಯಿ ಪುಲೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಾಗೂ ಸದಸ್ಯರು ಶಿಕ್ಷಕ ಶಿಕ್ಷಕಿಯರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು