4:20 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಹಿಳೆಯರ ಶೈಕ್ಷಣಿಕ ಹಕ್ಕಿಗೆ ಹೋರಾಡಿದ ಮಹಾ ಮಾತೆ ಸಾವಿತ್ರಿ ಬಾಯಿ ಪುಲೆ: ಶಾಸಕ ಡಾ.ಎನ್.ಟಿ. ಶ್ರೀನಿವಾಸ್

03/01/2024, 22:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com
ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳಿಗಾಗಿ, ಸಾವಿತ್ರಿ ಬಾ ಪುಲೆ ಅವರು ನಡೆಸಿದ ಹೋರಾಟ ಇಂದಿಗೂ ಸ್ಪೂರ್ತಿ ಎಂದು ಶಾಸಕ ಡಾ. ಎನ್.ಟಿ.ಶ್ರೀನಿವಾಸ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ,ಕೂಡ್ಲಿಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ಸಾವಿತ್ರಿ ಬಾ ಪುಲೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕುಗಳಿಗಾಗಿ ಹೋರಟ ನಡೆಸಿದ ಸಾವಿತ್ರಿ ಬಾ ಪುಲೆರವರು, ಇಂದಿಗೂ ಎಂದೆಂದಿಗೂ ಸ್ಪೂರ್ತಿದಾಯಕರಾದವರು ಎಂದು ಶಾಸಕರು ನುಡಿದರು.
ಕೂಡ್ಲಿಗಿ ಕ್ಷೇತ್ರದ  ಗುಣಮಟ್ಟದ ಶಿಕ್ಷಣಕ್ಕಾಗಿ,ಪ್ರತಿಯೊಬ್ಬರು ಪತ್ರ ಬರೆಯುವ ಮೂಲಕ  ಅನೇಕ ಸಲಹೆ ಮತ್ತು ಸೂಚನೆ ನೀಡುತ್ತಿರುವುದು ಸಂತಸ  ತಂದಿದೆ ಎಂದರು. 
ಸಾವಿತ್ರಿ ಬಾ ಪುಲೆ ಅವರ ಪ್ರಶಸ್ತಿಗೆ ಪಾತ್ರರಾಗಿರುವ ಗುರು ಮಾತೆಯರು ಹಾಗೂ ಶಿಕ್ಷಕಿಯರು, ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ  ಸೇವೆ ಸಲ್ಲಿಸುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಮತ್ತು ಅವರೆಲ್ಲರಿಗೂ ಶಾಸಕರು ಅಭಿನಂಧನೆಗಳನ್ನು ತಿಳಿಸಿದರು. ನಂತರ ಸಂಘದ  ಬೇಡಿಕೆಗಳನ್ನು ಆಲಿಸಿದ ಶಾಸಕರು, ಮುಂದಿನ ದಿನಮಾನಗಳಲ್ಲಿ ಅವೆಲ್ಲವುಗಳನ್ನು ಹಂತ ಹಂತವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು. ಗಣನೀಯ ಸೇವೆಸಲ್ಲಿಸಿದ ಹಾಗೂ ನಿವೃತ್ತ ಶಿಕ್ಷಕಿಯರನ್ನು, ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಹಶಿಲ್ದಾರರಾದ ಎಮ್.ರೇಣುಕಮ್ಮ ಸೇರಿದಂತೆ, ತಾಲೂಕು ಮಟ್ಟದ ವಿವಿದ ಇಲಾಖೆಗಳ ಅಧಿಕಾರಿಗಳು ಸಾವಿತ್ರಿ ಬಾಯಿ ಪುಲೆ ಶಿಕ್ಷಕರ ಸಂಘದ ಪದಾಧಿಕಾರಿಗಳು, ಹಾಗೂ ಸದಸ್ಯರು ಶಿಕ್ಷಕ ಶಿಕ್ಷಕಿಯರು ಇದ್ದರು

ಇತ್ತೀಚಿನ ಸುದ್ದಿ

ಜಾಹೀರಾತು