5:49 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಹಿಂದೂಗಳನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ಥಾನ ನಿರ್ಮಾಣ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

04/01/2024, 10:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಿಂದೂಗಳನ್ನು ದುರ್ಬಲ ಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ರಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ. ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಕ್ಕೆ ನೂರು ಹಿಂದೂಗಳಿದ್ದರು, ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನ ಆಗಿತ್ತು ಎಂದರು.
ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಅದು ಮೊಗಲ್ ಸ್ಥಾನ ಅಥವಾ ಪಾಕಿಸ್ಥಾನ ಆಗುತ್ತದೆ. ಹಿಂದೂಗಳನ್ನು ಒಡೆದಾಳುವ ನೀತಿ ಆಫ್ಘಾನಿಸ್ತಾನ, ನಿರ್ಮಾಣಕ್ಕೆ ಕಾರಣವಾಗುತ್ತೆ. ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ಥಾನ ಅನ್ನೋ, ವಿಚಾರವೇ ತಲೆ ಎತ್ತುವುದಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್ ನದ್ದು ಎಸ್.ಡಿ.ಪಿ.ಐ, ಪಿ ಎಫ್.ಐ ಬೆಂಬಲಿಸುವ ನೀತಿ. ಪಾಕಿಸ್ಥಾನ ನಿರ್ಮಾಣಕ್ಕೆ ಕಾರಣವಾಗುತ್ತೀರಿ. ನೀವು ಮತ್ತು ನಿಮ್ಮ ಮಕ್ಕಳು ಸುರಕ್ಷಿತವಾಗಿ ಇರಬೇಕಾದರೆ, ಕಾಂಗ್ರೆಸ್ ಕೆಟ್ಟ ನೀತಿ ಮಾಡಬಾರದು. ಹಿಂದೂ ಬಹು ಸಂಖ್ಯಾತನಾಗಿದ್ದರೆ, ಭಾರತ, ಸಂವಿಧಾನ ಉಳಿಯುತ್ತೆ. ಹಿಂದೂ ಅಲ್ಪ ಸಂಖ್ಯಾತನಾದರೆ ಭಾರತ, ಸಂವಿಧಾನ ಉಳಿಯುವುದಿಲ್ಲ. ಹಿಂದೂ ರಾಷ್ಟ್ರವಾದರೆ ಆಫ್ಘಾನಿಸ್ತಾನ ಆಗಲು ಜಾಗವೇ ಇರಲ್ಲ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು