11:22 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಹಿಂದೂಗಳನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ಥಾನ ನಿರ್ಮಾಣ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ತಿರುಗೇಟು

04/01/2024, 10:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಹಿಂದೂಗಳನ್ನು ದುರ್ಬಲ ಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ರಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ. ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಕ್ಕೆ ನೂರು ಹಿಂದೂಗಳಿದ್ದರು, ಗಾಂಧಾರಿಯ ತವರು ಮನೆ ಆಫ್ಘಾನಿಸ್ತಾನ ಆಗಿತ್ತು ಎಂದರು.
ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಅದು ಮೊಗಲ್ ಸ್ಥಾನ ಅಥವಾ ಪಾಕಿಸ್ಥಾನ ಆಗುತ್ತದೆ. ಹಿಂದೂಗಳನ್ನು ಒಡೆದಾಳುವ ನೀತಿ ಆಫ್ಘಾನಿಸ್ತಾನ, ನಿರ್ಮಾಣಕ್ಕೆ ಕಾರಣವಾಗುತ್ತೆ. ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ಥಾನ ಅನ್ನೋ, ವಿಚಾರವೇ ತಲೆ ಎತ್ತುವುದಿಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್ ನದ್ದು ಎಸ್.ಡಿ.ಪಿ.ಐ, ಪಿ ಎಫ್.ಐ ಬೆಂಬಲಿಸುವ ನೀತಿ. ಪಾಕಿಸ್ಥಾನ ನಿರ್ಮಾಣಕ್ಕೆ ಕಾರಣವಾಗುತ್ತೀರಿ. ನೀವು ಮತ್ತು ನಿಮ್ಮ ಮಕ್ಕಳು ಸುರಕ್ಷಿತವಾಗಿ ಇರಬೇಕಾದರೆ, ಕಾಂಗ್ರೆಸ್ ಕೆಟ್ಟ ನೀತಿ ಮಾಡಬಾರದು. ಹಿಂದೂ ಬಹು ಸಂಖ್ಯಾತನಾಗಿದ್ದರೆ, ಭಾರತ, ಸಂವಿಧಾನ ಉಳಿಯುತ್ತೆ. ಹಿಂದೂ ಅಲ್ಪ ಸಂಖ್ಯಾತನಾದರೆ ಭಾರತ, ಸಂವಿಧಾನ ಉಳಿಯುವುದಿಲ್ಲ. ಹಿಂದೂ ರಾಷ್ಟ್ರವಾದರೆ ಆಫ್ಘಾನಿಸ್ತಾನ ಆಗಲು ಜಾಗವೇ ಇರಲ್ಲ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು