8:37 PM Saturday2 - August 2025
ಬ್ರೇಕಿಂಗ್ ನ್ಯೂಸ್
Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ…

ಇತ್ತೀಚಿನ ಸುದ್ದಿ

ಎಂಸಿಎಫ್ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ: ಅಂತಾರಾಷ್ಟ್ರೀಯ ಗುಣಮಟ್ಟದ ಕೃತಕ ಅಂಗಾಂಗಗಳ ವ್ಯವಸ್ಥೆ

04/01/2024, 23:07

ಮಂಗಳೂರು(reporterkarnataka.com):ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರ ಶಿಫಾರಸ್ಸಿನಂತೆ ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು.
ಶಾಸಕ ಡಾ.ಭರತ್ ಶೆಟ್ಟಿ ವೈ, ಸುರತ್ಕಲ್ ಅಥರ್ವ ಆಸ್ಪತ್ರೆಯ ಡಾ.ಪ್ರಶಾಂತ್ ಮೋಹನ್ ಅವರು ಫಲಾನುಭವಿಗಳಿಗೆ ಕೃತಕ ಅಂಗಾಂಗ ಜೋಡಣಾ ಸಲಕರಣೆ ವಿತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಳೆದ ಐದು ವರ್ಷಗಳಲ್ಲಿ ಅಗತ್ಯವುಳ್ಳವರಿಗೆ ಅಂತಾರಾಷ್ರ್ಟೀಯ ಗುಣಮಟ್ಟದ ಕೃತಕ ಅಂಗಾಂಗ ಜೋಡಣೆಯ ವ್ಯವಸ್ಥೆಯನ್ನು ಮಾಡುವ ಮೂಲಕ ಎಂಸಿಎಫ್ ಸಾಮಾಜಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದೆ ಎಂದು ಶ್ಲಾಘಿಸಿದರು. ಕ್ಲಾಸ್ ರೂಂ ನವೀಕರಣ, ಅಂಗನವಾಡಿ ಕೇಂದ್ರದ ನವೀಕರಣ, ಸರಕಾರಿ ಲೇಡಿಗೋಶನ್ ಆಸ್ಪತ್ರೆಗೆ ಟ್ರೋಲಿ, ಆಮ್ಲಜನಕ ಉತ್ಪಾದನಾ ಘಟಕ ಸೇರಿದಂತೆ ವಿವಿಧ ಸಹಾಯ, ಸಹಕಾರ ಮತ್ತು ಅಭಿವೃದ್ಧಿ ಕಾರ್ಯಗಳು ನಡೆದಿವೆ ಸಂಸ್ಥೆಗೆ ಈ ಸಂದರ್ಭದಲ್ಲಿ ಕೃತಜ್ನತೆ ಅರ್ಪಿಸುವುದಾಗಿ ಶಾಸಕರು ನುಡಿದರು.
ಎಂಸಿಎಫ್‍ನ ಸಿಇಒ ಆಗಿರುವ ನಿತಿನ್ ಎಂ. ಕಾಂತಕ್ ಅವರು ಮಾತನಾಡಿ, ಸಿಎಸ್‍ಆರ್ ನಿಧಿಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ಯೋಜನೆ ಜಾರಿಗೆ ಮುಂದೆಯೂ ಸಹಕಾರ ನೀಡುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಎಂಸಿಎಫ್ ಉತ್ಪಾದನಾ ವಿಭಾಗದ ಮುಖ್ಯಸ್ಥ ಗಿರೀಶ್ ಎಸ್. ಅವರು ಸಿಎಸ್‍ಆರ್ ಯೋಜನೆಯ ಕುರಿತಂತೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ,ಎಂಸಿಎಫ್‍ನ ಪ್ರಮುಖ ಅಧಿಕಾರಿಗಳು,ಸಿಎಸ್‍ಆರ್ ವಿಭಾಗದ ಅಧಿಕಾರಿಗಳು,ಎಂಡೋಲೈಟ್ ಸಂಸ್ಥೆಯ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.
ಎಂಸಿಎಫ್ ಸಂಸ್ಥೆಯ ಡಾ.ಯೋಗೀಶ್ ನಿರೂಪಿಸಿದರು. ಚೇತನ್ ಮೆಂಡೋನ್ಸಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು