12:14 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ನಾವು ಹೆಂಗೆ ಹಿಂದೂ ವಿರೋಧಿಗಳು? ರಾಜ್ಯದ ಬಹುತೇಕ‌ ಹಿಂದೂಗಳೇ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಆಯ್ಕೆ ಮಾಡಿದ್ದು: ಗೃಹ ಸಚಿವ ಡಾ. ಪರಮೇಶ್ವರ್ ತಿರುಗೇಟು

05/01/2024, 15:04

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಬಿಜೆಪಿ ಆಡಳಿತವನ್ನು ತಿರಸ್ಕರಿಸಿ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನರು ಹಿಂದೂಗಳೇ ಆಗಿದ್ದಾರೆ. ಹಾಗಿರುವಾಗ ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದರು.
ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ. ಏನೇ ಆರೋಪ ಮಾಡುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು,ನಾವು ಕೇಸ್ ರೀ ಓಪನ್ ಮಾಡಿಲ್ಲ. ಪೊಲೀಸ್ ಠಾಣೆಯಲ್ಲಿ ಇರುವ ಪ್ರಕರಣಗಳ ವಿರುದ್ಧ ಅಧಿಕಾರಿ ಕ್ರಮ ತೆಗೆದುಕೊಳ್ಳಲು ಹೋದರೆ ರೀ ಓಪನ್ ಮಾಡಿದ್ದೀರಾ ಅಂತ ಕೇಳಿದರೆ ಹೇಗೆ? ಕೋರ್ಟ್ ಸೂಚನೆ ಕೊಟ್ಟಿದ್ದರೆ ನಾವು ಕೇಳಬಾರದಾ? ಬಿಜೆಪಿಯವರು ಕೋರ್ಟ್, ಕಾನೂನಿಗೂ ಬೆಲೆ ಕೊಡುವುದಿಲ್ಲ ಎಂದು ಕಿಡಿ ಕಾರಿದರು.
ಹುಬ್ಬಳ್ಳಿಯಲ್ಲಿ ಶ್ರೀಕಾಂತ್‌ ಪೂಜಾರಿ ಬಂಧನ ಬಗ್ಗೆ ಮಾತನಾಡಿದ ಅವರು,16 ಪ್ರಕರಣಗಳಲ್ಲಿ ಭಾಗಿಯಾಗಿರುವ ಈತನ ವಿಷಯವನ್ನು ಇಡೀ ದೇಶದಲ್ಲಿ ದೊಡ್ಡದು ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದರ ಅರ್ಥ ಬಿಜೆಪಿಯವರು ಅಪರಾಧಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಅರ್ಥ. 9 ಸಾರಾಯಿ ಕೇಸ್ ಸೇರಿದಂತೆ ಬೇರೆ ಬೇರೆ ಪ್ರಕರಣಗಳು ಆತನ ಮೇಲಿದೆ ಎಂದು ವಿವರಿಸಿದರು.
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ಇತ್ತು, ಊಟ ಮಾಡಿ ಬಂದೆ. ರಾಜಕೀಯ ಬಗ್ಗೆಯೂ ಚರ್ಚೆ ಆಗಿದೆ. ಅದನ್ನು ಬಹಿರಂಗಪಡಿಸಲು ಆಗುತ್ತಾ? ನಾವು ರಾಜಕಾರಣಿಗಳು, ರಾಜಕೀಯ ಬಗ್ಗೆ ಮಾತಾಡಿಯೇ ಇರುತ್ತೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು