10:06 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಅಕ್ರಮ ಮರಳು ಸಾಗಾಟಕ್ಕೆ ಲಂಚ: ಲೋಕಾಯುಕ್ತ ಬಲೆಗೆ ತಹಶೀಲ್ದಾರ್, ಜೀಪ್ ಚಾಲಕ ಕೂಡ ಅಂದರ್

06/01/2024, 11:38

ಹಾವೇರಿ(reporterkarnataka.com): ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ರಾಣಿಬೆನ್ನೂರು ತಹಶೀಲ್ದಾರ್ ಹಾಗೂ ಚಾಲಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಜೀಪ್ ಚಾಲಕ ಲಂಚ ಹಣ ಪಡೆದುಕೊಂಡು ರಾಣಿಬೆನ್ನೂರು ನಗರದ ವೀರಭದ್ರೇಶ್ವರ ಬಡಾವಣೆಯಲ್ಲಿರುವ ಮನೆಯಲ್ಲಿ ತಹಶೀಲ್ದಾರ್ ಹನುಮಂತ ಶಿರಹಟ್ಟಿ ಅವರಿಗೆ ಕೊಡುವ ವೇಳೆ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ತಹಶೀಲ್ದಾರ್ ಅವರು ರಾಣಿಬೆನ್ನೂರಿನ ಮಂಜುನಾಥ ವಾಲೀಕಾರ ಅವರಿಗೆ ಸೇರಿದ ಲಾರಿಯಲ್ಲಿ ಅಕ್ರಮ ಮರಳು ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಲಾರಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಎರಡು ಲಾರಿಗಳನ್ನು ಬಿಡುಗಡೆ ಮಾಡಲು ತಹಶೀಲ್ದಾರ್ ಹನುಮಂತ ಅವರು 12 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದರು. ತಹಶೀಲ್ದಾರ್ ಚಾಲಕ ಲಂಚ ಹಣ ಪಡೆದುಕೊಂಡು ತಹಶೀಲ್ದಾರ್ ಅವರ ಮನೆಗೆ ಬಂದು ಹಣ ನೀಡುತ್ತಿದ್ದಾಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು