12:30 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪ್ರೊ. ಅಮೃತ ಸೋಮೇಶ್ವರ ಅಸ್ತಂಗತ: ಮುಖ್ಯಮಂತ್ರಿ ಸಹಿತ ಗಣ್ಯರ ಸಂತಾಪ

06/01/2024, 19:32

ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಅಮೃತ ಸೋಮೇಶ್ವ(88) ಅವರು ಅನಾರೋಗ್ಯದಿಂದ ಶನಿವಾರ ಕೊನೆಯುಸಿರೆಳೆದರು.
ಲೇಖಕ, ಯಕ್ಷಗಾನ ಪ್ರಸಂಗಕರ್ತ, ಅನುವಾದಕ, ಸಂಶೋಧಕ, ವಿಮರ್ಶಕ, ಜಾನಪದ ವಿದ್ವಾಂಸ, ಕವಿ, ಕತೆಗಾರ, ನಾಟಕಕಾರ ಆಗಿರುವ ಅಮೃತ ಸೋಮೇಶ್ವರ ಅವರು ಶನಿವಾರ ಸ್ವಗೃಹದಲ್ಲಿ ಅಸ್ತಂಗತರಾದರು. 1968ರಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿಗೆ ಪ್ರಾಧ್ಯಾಪಕರಾಗಿ ಸೇರ್ಪಡೆಗೊಂಡರು. ಅಲ್ಲಿ ಕನ್ನಡ ಸಂಘ, ಯಕ್ಷರಂಜಿನಿ ಮುಂತಾದ ಸಂಘನೆಗಳನ್ನು ಹುಟ್ಟುಹಾಕಿ ಬರಹಗಾರರನ್ನು ಸೃಷ್ಟಿಸಿದ್ದು ಮಾತ್ರವಲ್ಲದೆ ಕಲಾವಿದರ ಹುಟ್ಟಿಗೆ ಕಾರಣರಾದರು. ಪ್ರೊ. ಅಮೃತ ಸೋಮೇಶ್ವರ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸಂದಾಯವಾಗಿದೆ.
ಪ್ರೊ. ಅಮೃತ ಸೋಮೇಶ್ವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು