8:13 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

06/01/2024, 19:50

ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ.

ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು