11:23 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಆರಾಧ್ಯ ಮಠ: ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

06/01/2024, 19:50

ಮಂಗಳೂರು (reporterkarnataka com):ಮಿಲಾಗ್ರಿಸ್ ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ.

ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್ ವಂ| ರೆ| ಡಾ| ಅಲೋಶಿಯಸ್ ಪೌಲ್ ಡಿಸೋಜ ಧಾರ್ಮಿಕ ವಿಧಿಗಳೊಂದಿಗೆ ಬಲಿಪೂಜೆ ನೆರವೇರಿಸಿದರು. ಜೈಲ್ ರೋಡ್ ನ ಸಂತ ಅನ್ನ ಫ್ರಾಯರಿಯ ಮುಖ್ಯಾಧಿಕಾರಿ ವಂ| ರೋಕಿ ಡಿ’ಕುನ್ಹಾ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಈ ಮಠಕ್ಕೆ ಸೇರ್ಪಡೆಗೊಂಡ ಬಳಿಕ ಧರ್ಮ ಭಗಿನಿಯರು ಸಮಾಜದೊಂದಿಗೆ ಬೆರೆತುಕೊಳ್ಳದೆ ಮಠದೊಳಗೆಯೇ ಇದ್ದು, ಲೋಕ ಕಲ್ಯಾಣಕ್ಕಾಗಿ ನಿರಂತರ ಪ್ರಾರ್ಥಿಸುತ್ತಾರೆ. ಮಠದೊಳಗೆ ಇರುವುದರಿಂದ ಇವರನ್ನು ಭಿತರ್ಲಿ ಮಾದ್ರಿ’ (ಮಠದೊಳಗಿನ ಧರ್ಮ ಭಗಿನಿಯರು) ಎಂದು ಕರೆಯಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು