5:27 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ಭೀಕರ ಅಪಘಾತ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಸಾವು

07/01/2024, 21:02

ಮೋಹನ್ ನಂಜನಗೂಡು ಮೈಸೂರು

info.reporterkarnataka@gmil.com

ಜಮೀನಿನಲ್ಲಿ ಕೆಲಸ ಮುಗಿಸಿ ಮಧ್ಯಾಹ್ನದ ವೇಳೆಯಲ್ಲಿ ಊಟಕ್ಕೆಂದು ತನ್ನ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ರೈತನ ಮೇಲೆ ಡಸ್ಟ್ ತುಂಬಿದ ಹತ್ತು ಚಕ್ರದ ಟಿಪ್ಪರ್ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಮತ್ತು ಹಲ್ಲರೆ ಮುಖ್ಯರಸ್ತೆಯಲ್ಲಿ ನಡೆದಿದೆ.
ಹಲ್ಲರೆ ಗ್ರಾಮದ ಅಬ್ದುಲ್ ಸಲಾಂ (55) ಮೃತ ರೈತ. ಇವರು ಕಸುವಿನಹಳ್ಳಿ ಸಮೀಪದ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದು ಮಧ್ಯಾಹ್ನದ ಊಟದ ವೇಳೆಯಲ್ಲಿ ಊಟ ಮಾಡುವ ಸಲುವಾಗಿ ಗ್ರಾಮದತ್ತ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯ ಮೇಲೆ ಡಸ್ಟ್ ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿಯ ಚಕ್ರಕ್ಕೆ ಸಿಲುಕಿದ ರೈತನ ಮೇಲೆ ಹರಿದು ಸ್ಥಳದಲ್ಲಿ ಸಾವನಪ್ಪಿರುವ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಮೃತ ರೈತನ ಕುಟುಂಬಸ್ಥರು ಮತ್ತು ಹಲ್ಲರೆ ಗ್ರಾಮಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಗ್ರಾಮದ ಮುಂಭಾಗದಲ್ಲಿ ಬಾರಿ ಗಾತ್ರದ ಟಿಪ್ಪರ್ ಮತ್ತು ಲಾರಿಗಳು ಡಸ್ಟು ಮತ್ತು ಬಾರಿ ಪ್ರಮಾಣದ ಕೋರೆ ಕಲ್ಲು ಮತ್ತು ಜಲ್ಲಿಯನ್ನು ತುಂಬಿಕೊಂಡು ತುಂಬಾ ವೇಗವಾಗಿ ಸಂಚರಿಸುತ್ತಿವೆ.
ಸಾಕಷ್ಟು ಬಾರಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಈ ವಿಚಾರವಾಗಿ ಮೌಖಿಕವಾಗಿ ತಿಳಿಸಲಾಗಿದೆ ಆದರೂ ಕೂಡ ಪೊಲೀಸರು ಉಡಾಫೆ ವರ್ತನೆ ತೋರಿ ಚಾಲನೆ ಮಾಡುವ ಟಿಪ್ಪರ್ ಲಾರಿ ಚಾಲಕರಿಗೆ ಯಾವುದೇ ರೀತಿಯ ನಿತಿ ಪಾಠ ಹೇಳಲು ಮುಂದಾಗಿಲ್ಲ. ಇದರಿಂದ ಇಂತಹ ಅವಘಡಗಳು ಸಂಭವಿಸಿ ಪ್ರಾಣ ಕಳೆದುಕೊಳ್ಳುವ ಸನ್ನಿವೇಶ ಎದುರಾಗಿದೆ. ಕೂಡಲೇ ಬಾರಿ ಪ್ರಮಾಣದ ಟಿಪ್ಪರ್ ಮತ್ತು ಲಾರಿ ಚಾಲಕರಿಗೆ ತಿಳಿಹೇಳಿ ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಸಂಭವಿಸದ ರೀತಿಯಲ್ಲಿ ಪೊಲೀಸರು ಎಚ್ಚರಿಕೆ ವಹಿಸಬೇಕು ಎಂದು ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಈ ಘಟನೆಯ ವಿಚಾರವಾಗಿ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಘಟನೆಗೆ ಕಾರಣವಾದ ಟಿಪ್ಪರ್ ಮತ್ತು ದ್ವಿಚಕ್ರ ವಾಹನವನ್ನು ನಂಜನಗೂಡು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡು ಮೃತ ರೈತನ ಶವವನ್ನು ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು