11:11 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ

07/01/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರ್ವೀನ್ ಗೆ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದೆ. ಆಂಬುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಜೊತೆ ಸೇರಿ ಆಂಬುಲೆನ್ಸ್ ಚಾಲಕ ಆರೀಫ್ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಡೆಲವರಿ ಬಳಿಕ ತಾಯಿ-ಮಗು ಆರೋಗ್ಯವಾಗಿದ್ದು ಹೆರಿಗೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನದಲ್ಲಿ ಇದು ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣ. ಮೂರರಲ್ಲಿ ಎರಡು ಪ್ರಕರಣದಲ್ಲಿ ಆಂಬುಲೆನ್ಸ್ ಚಾಲಕ ಹಾಗೂ ಗರ್ಭಿಣಿಯ ಜೊತೆಗಿದ್ದವರೇ ಹೆರಿಗೆ ಮಾಡಿಸಿದ್ದಾರೆ. ಆದರೆ, ಸ್ಥಳಿಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರುತ್ತೆ. ಹೆರಿಗೆ ದಿನಾಂಕದ ಮೊದಲು ಅಂಗನವಾಡಿ ಕಾರ್ಯಕರ್ತರ ಮೂಲಕ ಅವರಿಗೆ ಎಚ್ಚರಿಕೆ ಕೊಡಿಸಬಹುದು. ಆದರೆ, ಮಹಿಳೆಯರು ಹೆರಿಗೆ ನೋವು ಬರುವವರೆಗೆ ಮನೆಯಲ್ಲೇ ಇದ್ದರೆ ನಾಳೆ ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು. ಆರೋಗ್ಯ ಅಧಿಕಾರಿಗಳು ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು