7:05 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಆಂಬುಲೆನ್ಸ್ ನಲ್ಲೇ ಹೆತ್ತಳಾ ತಾಯಿ!: ಗಂಡು ಮಗುವಿಗೆ ಜನ್ಮ ನೀಡಿದ ಅಸ್ಸಾಂ ಮೂಲದ ಕೂಲಿ ಕಾರ್ಮಿಕೆ

07/01/2024, 21:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬು ಗರ್ಭಿಣಿಯೋರ್ವಳು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ನಡೆದಿದೆ.
ಸುಲ್ತಾನ್ ಪರ್ವೀನ್ ಆಂಬುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ಪರ್ವೀನ್ ಸುಲ್ತಾನ್ ಅಸ್ಸಾಂ ಮೂಲದವರು. ಕೂಲಿಗಾಗಿ ಮೂಡಿಗೆರೆ ತಾಲೂಕಿನ ಬಾಳೂರು ಎಸ್ಟೇಟ್ ಗೆ ಆಗಮಿಸಿದ್ದರು. ತೋಟದ ಲೈನ್ ಮನೆಗಳಲ್ಲಿ ವಾಸವಿದ್ದ ಪರ್ವೀನ್ ತುಂಬು ಗರ್ಭೀಣಿಯಾಗಿದ್ದು ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕೂಡಲೇ ಆಂಬುಲೆನ್ಸ್ ನಲ್ಲಿ ಆಕೆಯನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲು ಮುಂದಾದರೂ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರ್ವೀನ್ ಗೆ ಆಂಬುಲೆನ್ಸ್ ನಲ್ಲೇ ಹೆರಿಗೆಯಾಗಿದೆ. ಆಂಬುಲೆನ್ಸ್ ಚಾಲಕ ಆರೀಫ್ ಹಾಗೂ ಮಹಿಳೆಯ ಸಂಬಂಧಿ ಜೊತೆ ಸೇರಿ ಆಂಬುಲೆನ್ಸ್ ಚಾಲಕ ಆರೀಫ್ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ. ಡೆಲವರಿ ಬಳಿಕ ತಾಯಿ-ಮಗು ಆರೋಗ್ಯವಾಗಿದ್ದು ಹೆರಿಗೆ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ತಾಲೂಕಿನಲ್ಲಿ ಕಳೆದ 10 ದಿನದಲ್ಲಿ ಇದು ಆಂಬುಲೆನ್ಸ್ ನಲ್ಲಿ ಹೆರಿಗೆಯಾದ ಮೂರನೇ ಪ್ರಕರಣ. ಮೂರರಲ್ಲಿ ಎರಡು ಪ್ರಕರಣದಲ್ಲಿ ಆಂಬುಲೆನ್ಸ್ ಚಾಲಕ ಹಾಗೂ ಗರ್ಭಿಣಿಯ ಜೊತೆಗಿದ್ದವರೇ ಹೆರಿಗೆ ಮಾಡಿಸಿದ್ದಾರೆ. ಆದರೆ, ಸ್ಥಳಿಯರು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಬಳಿ ಎಲ್ಲಾ ಮಾಹಿತಿ ಇರುತ್ತೆ. ಹೆರಿಗೆ ದಿನಾಂಕದ ಮೊದಲು ಅಂಗನವಾಡಿ ಕಾರ್ಯಕರ್ತರ ಮೂಲಕ ಅವರಿಗೆ ಎಚ್ಚರಿಕೆ ಕೊಡಿಸಬಹುದು. ಆದರೆ, ಮಹಿಳೆಯರು ಹೆರಿಗೆ ನೋವು ಬರುವವರೆಗೆ ಮನೆಯಲ್ಲೇ ಇದ್ದರೆ ನಾಳೆ ಏನಾದ್ರು ಹೆಚ್ಚು-ಕಡಿಮೆಯಾದರೆ ಜವಾಬ್ದಾರಿ ಯಾರು. ಆರೋಗ್ಯ ಅಧಿಕಾರಿಗಳು ಗರ್ಭಿಣಿಯರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು