11:13 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಾಡಕಚೇರಿ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಪ್ರಕರಣ: ಉಪ ತಹಸೀಲ್ದಾರ್ ಶಿವಕುಮಾರ್ ಸಸ್ಪೆಂಡ್; ಪ್ರಾದೇಶಿಕ ಆಯುಕ್ತರ ಆದೇಶ

08/01/2024, 15:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಿರಂತರ ಕಿರುಕುಳದಿಂದ ಬೇಸತ್ತು ಡೆತ್ ನೋಟ್ ಬರೆದು ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾದ ಕಂಪ್ಯೂಟರ್ ಆಪರೇಟರ್ ಪರಮೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಉಪ ತಹಸೀಲ್ದಾರ್ ಶಿವಕುಮಾರ್ ಅವರನ್ನ ಸಸ್ಪೆಂಡ್ ಮಾಡಲಾಗಿದೆ.
ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ಅವರು ಅಮಾನತ್ತಿನ ಆದೇಶ ಹೊರಡಿಸಿದ್ದಾರೆ.


ಜನವರಿ 7 ಭಾನುವಾರದಂದು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ನಾಡಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ಪರಮೇಶ್ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ನೀಡುತ್ತಿರುವ ಕಿರುಕುಳ ಕಾರಣ ಎಂದು ಡೆತ್ ನೋಟ್ ನಲ್ಲಿ ಬರೆದು ವಾಟ್ಸ್ ಅಪ್ ಸ್ಟೇಟಸ್ ನಲ್ಲಿ ಹಾಕಿ ವಿಷ ಸೇವಿಸಿದ್ದರು. ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದರು. ಇಂದು ಶವಾಗಾರಕ್ಕೆ ನಂಜನಗೂಡು ಶಾಸಕ ದರ್ಶನ್ ಧ್ರವನಾರಾಯಣ್ ಹಾಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ರವರು ಭೇಟಿ ನೀಡಿದ್ದರು. ಈ ವೇಳೆ ಉಪತಹಸೀಲ್ದಾರ್ ಮೇಲೆ ಕ್ರಮ ಕೈಗೊಳ್ಳುವಂತೆ ಮೃತರ ಕುಟುಂಬಸ್ಥರು ಒತ್ತಾಯಿಸಿದ್ದರು. ಅಲ್ಲದೆ ಶಾಸಕ ದರ್ಶನ್ ಧೃವನಾರಾಯಣ್ ಸಹ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು. ಈ ಹಿನ್ನಲೆ ಕ್ರಮಕ್ಕೆ ಮುಂದಾದ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್ ರವರು ಉಪತಹಸೀಲ್ದಾರ್ ಶಿವಕುಮಾರ್ ಅವರನ್ನ ಅಮಾನತ್ತು ಪಡಿಸಿ ಆದೇಶ ಪ್ರಕಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು