12:08 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ

09/01/2024, 15:34

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಸಿಇಒ ಆಗಿರುವ 39ರ ಹರೆಯದ ಸುಚನಾ ಸೇಠ್ ಬಂಧಿತ ಮಹಿಳೆ. ಬೆಂಗಳೂರಿನ ‘ಮೈಂಡ್‌ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರ ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾನೆ.
ಉತ್ತರ ಗೋವಾದ ‘ಸೋಲ್ ಬ್ಯಾನಿಯನ್ ಗ್ರ್ಯಾಂಡ್’ ಹೋಟೆಲ್‌ಗೆ ಮಹಿಳೆ ತನ್ನ 4ರ ಹರೆಯದ ಪುತ್ರನೊಂದಿಗೆ ಶನಿವಾರ ತೆರಳಿದ್ದಳು. ಸೋಮವಾರ ಕೊಠಡಿ ತೆರವುಗೊಳಿಸಿ ಏಕಾಂಗಿಯಾಗಿ ಹೊರಬಂದಿದ್ದಳು. ಬೆಂಗಳೂರಿಗೆ ಮರಳಲು ಟ್ಯಾಕ್ಸಿ ಬಾಡಿಗೆ ಕೇಳಿದ್ದಳು. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಬಾಲಕನ ಬಗ್ಗೆ ವಿಚಾರಿಸಿದ್ದರು. ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಬಿಟ್ಟು ಬಂದಿರುವುದಾಗಿ ಮಹಿಳೆ ಸಬೂಬು ನೀಡಿ ಹೊಟೇಲ್ ನಿಂದ ಹೊರಬಂದಿದ್ದಳು. ಹೊಟೇಲ್ ಸಿಬ್ಬಂದಿಗಳು
ಕೊಠಡಿ ಶುಚಿಗೊಳಿಸುವಾಗ ರಕ್ತದ ಕಲೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ ಮಹಿಳೆ ತೆರಳುತ್ತಿದ್ದ ಕಾರಿನ ಚಾಲಕನನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಕೊಂಕಣಿಯಲ್ಲಿ ಮಾತನಾಡಿದ ಪೊಲೀಸರು, ಘಟನೆ ಬಗ್ಗೆ ಚಾಲಕನಿಗೆ ವಿವರಿಸಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರಿಗೆ ಹಿಡಿದುಕೊಡಲು ಸೂಚನೆ ನೀಡಿದ್ದಾರೆ.
ಚಾಲಕನಿಗೆ ಈ ಮಾಹಿತಿ ತಿಳಿದಾಗ ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಸಾಗುತ್ತಿತ್ತು. ಐಮಂಗಲ ಸಮೀಪದ ಪೊಲೀಸ್ ಠಾಣೆ ಗಮನಿಸಿದ ಚಾಲಕ, ನೇರವಾಗಿ ಠಾಣೆಗೆ ಕಾರು ತಂದಿದ್ದಾರೆ. ಕಾರಿನ ಡಿಕ್ಕಿ ತೆರೆದಾಗ ಸೂಟ್ ಕೇಸ್ ಬ್ಯಾಗಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು