10:06 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ

09/01/2024, 15:34

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಸಿಇಒ ಆಗಿರುವ 39ರ ಹರೆಯದ ಸುಚನಾ ಸೇಠ್ ಬಂಧಿತ ಮಹಿಳೆ. ಬೆಂಗಳೂರಿನ ‘ಮೈಂಡ್‌ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರ ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾನೆ.
ಉತ್ತರ ಗೋವಾದ ‘ಸೋಲ್ ಬ್ಯಾನಿಯನ್ ಗ್ರ್ಯಾಂಡ್’ ಹೋಟೆಲ್‌ಗೆ ಮಹಿಳೆ ತನ್ನ 4ರ ಹರೆಯದ ಪುತ್ರನೊಂದಿಗೆ ಶನಿವಾರ ತೆರಳಿದ್ದಳು. ಸೋಮವಾರ ಕೊಠಡಿ ತೆರವುಗೊಳಿಸಿ ಏಕಾಂಗಿಯಾಗಿ ಹೊರಬಂದಿದ್ದಳು. ಬೆಂಗಳೂರಿಗೆ ಮರಳಲು ಟ್ಯಾಕ್ಸಿ ಬಾಡಿಗೆ ಕೇಳಿದ್ದಳು. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಬಾಲಕನ ಬಗ್ಗೆ ವಿಚಾರಿಸಿದ್ದರು. ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಬಿಟ್ಟು ಬಂದಿರುವುದಾಗಿ ಮಹಿಳೆ ಸಬೂಬು ನೀಡಿ ಹೊಟೇಲ್ ನಿಂದ ಹೊರಬಂದಿದ್ದಳು. ಹೊಟೇಲ್ ಸಿಬ್ಬಂದಿಗಳು
ಕೊಠಡಿ ಶುಚಿಗೊಳಿಸುವಾಗ ರಕ್ತದ ಕಲೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ ಮಹಿಳೆ ತೆರಳುತ್ತಿದ್ದ ಕಾರಿನ ಚಾಲಕನನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಕೊಂಕಣಿಯಲ್ಲಿ ಮಾತನಾಡಿದ ಪೊಲೀಸರು, ಘಟನೆ ಬಗ್ಗೆ ಚಾಲಕನಿಗೆ ವಿವರಿಸಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರಿಗೆ ಹಿಡಿದುಕೊಡಲು ಸೂಚನೆ ನೀಡಿದ್ದಾರೆ.
ಚಾಲಕನಿಗೆ ಈ ಮಾಹಿತಿ ತಿಳಿದಾಗ ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಸಾಗುತ್ತಿತ್ತು. ಐಮಂಗಲ ಸಮೀಪದ ಪೊಲೀಸ್ ಠಾಣೆ ಗಮನಿಸಿದ ಚಾಲಕ, ನೇರವಾಗಿ ಠಾಣೆಗೆ ಕಾರು ತಂದಿದ್ದಾರೆ. ಕಾರಿನ ಡಿಕ್ಕಿ ತೆರೆದಾಗ ಸೂಟ್ ಕೇಸ್ ಬ್ಯಾಗಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು