9:12 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

4 ವರ್ಷದ ಪುತ್ರನನ್ನೇ ಹತ್ಯೆಗೈದ ಹೆತ್ತಬ್ಬೆ: ಬ್ಯಾಗ್ ನಲ್ಲಿ ಶವ ತುಂಬಿಸಿ ಕಾರಿನಲ್ಲಿ ಸಾಗಿಸುತ್ತಿದ್ದ ಕ್ರೂರಿ ತಾಯಿಯ ಬಂಧನ

09/01/2024, 15:34

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಹೆತ್ತಬ್ಬೆಯೊಬ್ಬಳು ತನ್ನ ಪುಟ್ಟ ಮಗನನ್ನು ಕೊಂದು ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಿಸುತ್ತಿದ್ದಾಗ ಪೊಲೀಸ್ ಬಲೆಗೆ ಬಿದ್ದ ಘಟನೆ ನಡೆದಿದೆ. ಆರೋಪಿ ಮಹಿಳೆಯನ್ನು ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಸಿಇಒ ಆಗಿರುವ 39ರ ಹರೆಯದ ಸುಚನಾ ಸೇಠ್ ಬಂಧಿತ ಮಹಿಳೆ. ಬೆಂಗಳೂರಿನ ‘ಮೈಂಡ್‌ಫುಲ್ ಎಐ ಲ್ಯಾಬ್’ ಎಂಬ ಕೃತಕ ಬುದ್ಧಿಮತ್ತೆ ಕಂಪೆನಿಯ ಸಹ ಸಂಸ್ಥಾಪಕಿ ಸುಚನಾ ಸೇಠ್ ಅವರ ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾನೆ.
ಉತ್ತರ ಗೋವಾದ ‘ಸೋಲ್ ಬ್ಯಾನಿಯನ್ ಗ್ರ್ಯಾಂಡ್’ ಹೋಟೆಲ್‌ಗೆ ಮಹಿಳೆ ತನ್ನ 4ರ ಹರೆಯದ ಪುತ್ರನೊಂದಿಗೆ ಶನಿವಾರ ತೆರಳಿದ್ದಳು. ಸೋಮವಾರ ಕೊಠಡಿ ತೆರವುಗೊಳಿಸಿ ಏಕಾಂಗಿಯಾಗಿ ಹೊರಬಂದಿದ್ದಳು. ಬೆಂಗಳೂರಿಗೆ ಮರಳಲು ಟ್ಯಾಕ್ಸಿ ಬಾಡಿಗೆ ಕೇಳಿದ್ದಳು. ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಬಾಲಕನ ಬಗ್ಗೆ ವಿಚಾರಿಸಿದ್ದರು. ಸಂಬಂಧಿಕರ ಮನೆಯಲ್ಲಿ ಬಾಲಕನನ್ನು ಬಿಟ್ಟು ಬಂದಿರುವುದಾಗಿ ಮಹಿಳೆ ಸಬೂಬು ನೀಡಿ ಹೊಟೇಲ್ ನಿಂದ ಹೊರಬಂದಿದ್ದಳು. ಹೊಟೇಲ್ ಸಿಬ್ಬಂದಿಗಳು
ಕೊಠಡಿ ಶುಚಿಗೊಳಿಸುವಾಗ ರಕ್ತದ ಕಲೆಗಳನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪರಿಶೀಲನೆ ನಡೆಸಿ ಮಹಿಳೆ ತೆರಳುತ್ತಿದ್ದ ಕಾರಿನ ಚಾಲಕನನ್ನು ಫೋನ್ ಮೂಲಕ ಸಂಪರ್ಕಿಸಿದ್ದಾರೆ. ಕೊಂಕಣಿಯಲ್ಲಿ ಮಾತನಾಡಿದ ಪೊಲೀಸರು, ಘಟನೆ ಬಗ್ಗೆ ಚಾಲಕನಿಗೆ ವಿವರಿಸಿದ್ದಾರೆ. ಆರೋಪಿ ಮಹಿಳೆಯನ್ನು ಪೊಲೀಸರಿಗೆ ಹಿಡಿದುಕೊಡಲು ಸೂಚನೆ ನೀಡಿದ್ದಾರೆ.
ಚಾಲಕನಿಗೆ ಈ ಮಾಹಿತಿ ತಿಳಿದಾಗ ಕಾರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಿತ್ರದುರ್ಗದಿಂದ ಹಿರಿಯೂರು ಕಡೆಗೆ ಸಾಗುತ್ತಿತ್ತು. ಐಮಂಗಲ ಸಮೀಪದ ಪೊಲೀಸ್ ಠಾಣೆ ಗಮನಿಸಿದ ಚಾಲಕ, ನೇರವಾಗಿ ಠಾಣೆಗೆ ಕಾರು ತಂದಿದ್ದಾರೆ. ಕಾರಿನ ಡಿಕ್ಕಿ ತೆರೆದಾಗ ಸೂಟ್ ಕೇಸ್ ಬ್ಯಾಗಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಿಳೆಯನ್ನು ಬಂಧಿಸಿ ಗೋವಾ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು