11:13 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್: ಅಬುದಾಬಿಯಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿ 98.68 ಲಕ್ಷ ಮೌಲ್ಯದ 1.50 ಕೆಜಿ ಚಿನ್ನ ಪತ್ತೆ; ಪೊಲೀಸ್ ವಶಕ್ಕೆ

09/01/2024, 15:42

ಮಂಗಳೂರು(reporterkarnataka.com): ಅಬುಧಾಬಿಯಿಂದ ಬಂದ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನೊಬ್ಬನು ತನ್ನ ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದ ಒಂದೂವರೆ ಕೆಜಿ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಜ. 8ರಂದು
ಬಜ್ಪೆಗೆ ಬಂದಿಳಿದ ಪ್ರಯಾಣಿಕರೊಬ್ಬರು ನಡೆದಾಡುವ ವಿಚಿತ್ರ ವರ್ತನೆ ಕಂಡು ಕಸ್ಟಮ್ಸ್ ಅಧಿಕಾರಿಗಳು ಸಂಶಯದಿಂದ ತಪಾಸಣೆ ಮಾಡಿದಾಗ ಚಿನ್ನ ಇರುವುದು ಪತ್ತೆಯಾಗಿದೆ. 24 ಕ್ಯಾರೆಟ್ ಚಿನ್ನವನ್ನು ಪೇಸ್ಟ್ ಮಾಡಿ ಐದು ಉಂಡೆ ಮಾಡಿ ಅದನ್ನು ಗುದದ್ವಾರದಲ್ಲಿ ಬಚ್ಚಿಟ್ಟುಕೊಂಡಿದ್ದರು.
1,579 ಗ್ರಾಂ ಚಿನ್ನ ಪತ್ತೆಯಾಗಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನದ ಮಾರುಕಟ್ಟೆ ಮೌಲ್ಯ ಅಂದಾಜು 98.68 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿ ಪ್ರಯಾಣಿಕನನ್ನು ಬಂಧಿಸಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು