8:23 AM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಜ.13ರಂದು ನರಿಂಗಾನದಲ್ಲಿ ಕಂಬಳೋತ್ಸವ-2024: ಡಿಸಿಎಂ, ಗೃಹ ಸಚಿವರು ಭಾಗಿ; ಹೆಲಿಪ್ಯಾಡ್ ನಿರ್ಮಾಣ

10/01/2024, 09:16

ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಇತಿಹಾಸದಲ್ಲಿ ಮೊದಲ ಸರಕಾರಿ ಕಂಬಳವಾಗಿ ಗುರುತಿಸಿಕೊಂಡಿರುವ ನರಿಂಗಾನ ಕಂಬಳವು ಈ ಬಾರಿ ಎರಡನೇ ವರ್ಷದ ನರಿಂಗಾನ ಕಂಬಳೋತ್ಸವ ನರಿಂಗಾನ ಗ್ರಾಮದ ಮೋರ್ಲ ಬೋಳದ ಲವ-ಕುಶ ಜೋಡುಕರೆಯಲ್ಲಿ ಜ. 13ರಂದು ಬೆಳಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಹಾಗೂ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ನರಿಂಗಾನ ಕಂಬಳವು ಎಲ್ಲ ಜಾತಿ, ಧರ್ಮ, ವರ್ಗಗಳ ಜನರು ಸೇರಿಕೊಂಡು ಮಾಡುವ ಒಂದು ಸಾರ್ವಜನಿಕ ಕಂಬಳವಾಗಿದೆ. ಕಂಬಳೋತ್ಸವ ಸೌಹಾರ್ದತೆಯಿಂದ ಸಾಮರಸ್ಯತೆಯಿಂದ ಇಡೀ ದೇಶಕ್ಕೆ ಮಾದರಿಯಾಗಿ ನಡೆಯಲಿದೆ.
ಉದ್ಘಾಟನೆ ಸಮಾರಂಭ ಶನಿವಾರ ಜ.‌ 13ರಂದು ಬೆಳಗ್ಗೆ 10.30ಕ್ಕೆ ನಡೆಯಲಿದ್ದು ಸರ್ವ ಧರ್ಮದ ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ. ನೀಲೇಶ್ವರ ಪದ್ಮನಾಭ ತಂತ್ರಿಯವರು ಕಂಬಳ ಉದ್ಘಾಟಿಸಲಿದ್ದು, ವೇದಮೂರ್ತಿ ವರ್ಕಾಡಿ ಹೊಸಮನೆ ರಾಜೇಶ್ ತಾಳಿತ್ತಾಯರು, ಬೋಳ ಸಂತ ಲಾರೆನ್ಸರ ದೇವಾಲಯದ ಧರ್ಮಗುರು ಅತಿ ವಂದನೀಯ ರೆ. ಫಾ. ಪೆಡ್ರಿಕ್ ಕೊರೆಯಾ, ಮಂಜನಾಡಿ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಅಜೀಝ್ ಮೈಸೂರು ಬಾವ, ಗುಣಕರ ಆಳ್ವ ಯಾನೆ ರಾಮ ರೈ ಬೋಳಿಯಾರುಗುತ್ತು, ಬಡಾಜೆ ರವಿಶಂಕರ್ ಶೆಟ್ಟಿ, ಗಣೇಶ್ ಭಟ್ ಪಂಜಾಲ ಸೇರಿದಂತೆ ಎಲ್ಲ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಕಂಬಳ ಉದ್ಘಾಟನೆಗೊಳ್ಳಲಿದೆ.
ಮಧ್ಯಾಹ್ನ 3.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು ಕೆಪಿಸಿಸಿ ಅಧ್ಯಕ್ಷರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯ ಗೃಹ ಸಚಿವರಾಗಿರುವ ಡಾ. ಜಿ. ಪರಮೇಶ್ವರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್, ಯುವಜನ ಮತ್ತು ಕ್ರೀಡಾ ಸಚಿವರಾಗಿರುವ ಬಿ.‌ ನಾಗೇಂದ್ರ, ವಕ್ಫ್ ಮತ್ತು ಪೌರಾಡಳಿತ ಸಚಿವ ರಹೀಂ‌ ಖಾನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ. ಎನ್. ರಾಜೇಂದ್ರ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಕಂಬಳ‌ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ , ಪ್ರಧಾನ ಸಂಚಾಲಕ ಗಿರೀಶ್ ಆಳ್ವ, ಪಿ. ಆರ್.‌ಶೆಟ್ಟಿ ಪೊಯ್ಯೆಲು, ಲೋಕೇಶ್ ಶೆಟ್ಟಿ ಮುಚ್ಚೂರು, ನವೀನ್ ಚಂದ್ರ ಆಳ್ವ, ಭರತ್ ರಾಜ್ ಶೆಟ್ಟಿ ಪಜೀರುಗುತ್ತು, ರವೀಂದ್ರನಾಥ ಶೆಟ್ಟಿ ತಲಪಾಡಿ ದೊಡ್ಡಮನೆ, ಪದ್ಮನಾಭ ನರಿಂಗಾನ, ಚಂದ್ರಹಾಸ್ ಕರರ್ಕೇರ, ಮಮತಾ ಡಿ.ಎಸ್.ಗಟ್ಟಿ, ಅಬ್ದುಲ್ ಜಲೀಲ್ ಮೋಂಟುಗೋಳಿ, ಎನ್ ಎಸ್ ನಾಸಿರ್ ನಡುಪದವು, ಪಿಯುಸ್ ರಾಡ್ರಿಗಸ್, ಮುರಲೀಧರ ಶೆಟ್ಟಿ ಮೋರ್ಲ, ಚಂದ್ರಹಾಸ್ ಶೆಟ್ಟಿ ಮೋರ್ಲ ಕರುಣಾಕರ ಶೆಟ್ಟಿ ಮೋರ್ಲ, ಮ್ಯಾಕ್ಇಮ್ ಡಿಸೋಜ,ವಿನಯ್ ಶೆಟ್ಟಿ ಮೋರ್ಲ, ಸುಂದರ ಪೂಜಾರಿ ಕೋಡಿಮಜಲು ಮೊದಲಾದವರು ಉಪಸ್ಥಿತರಿದ್ದರು.
ಹೆಲಿಪ್ಯಾಡ್ ನಿರ್ಮಾಣ:
ಉಪ ಮುಖ್ಯಮಂತ್ರಿಗಳು, ರಾಜ್ಯ ಗೃಹಸಚಿವರು ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಕಂಬಳ ಕರೆಯ ಬಳಿಗೆ ಆಗಮಿಸಲಿದ್ದು ಕೊಲ್ಲರಕೋಡಿ ಶಾಲೆಯ ಬಳಿ ಹೆಲಿಪ್ಯಾಡ್ ನಿರ್ಮಾಣ ಆಗುತ್ತಿದೆ.
ಈ ಬಾರಿಯ ಕಂಬಳದಲ್ಲಿ ಸನ್ಮಾನದ ಗೌರವ: ಕಂಬಳ ಕೋಣಗಳ ಯಜಮಾನರಾಗಿ ಸುಮಾರು ಇಪ್ಪತ್ತೈದು ವರ್ಷಗಳ ಕಾಲ ಪಜೀರು ಕೇದಗೆಬೈಲು ಲವ- ಕುಶ ಜೋಡುಕರೆ ಕಂಬಳದ ವ್ಯವಸ್ಥಾಪಕರಾಗಿ, ಪ್ರಸ್ತುತ ಕಳೆದ ಎರಡು ವರ್ಷಗಳಿಂದ ನರಿಂಗಾನದ ಲವ-ಕುಶ ಜೋಡುಕರೆ ಕಂಬಳದ ಗೌರವಾಧ್ಯಕ್ಷರಾದ ಹಿರಿಯರಾದ ವೆಂಕಪ್ಪ ಕಾಜವ ಮಿತ್ತಕೋಡಿ ಹಾಗೂ ಕಂಬಳಕ್ಷೇತ್ರದ ಸಾಧಕರಾಗಿ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಮಹಾಬಲ ಶೆಟ್ಟಿ ಮಾಣಿಸಾಗು, ಎನ್. ರವೀಂದ್ರ ಶೆಟ್ಟಿ ನುಲಿಯಾಲು ಹಾಗೂ ಎನ್. ಪದ್ಮನಾಭ ನರಿಂಗಾನ ಅವರನ್ನು ಸನ್ಮಾನಿಸಲಾಗುವುದು.
ಕೋಣಗಳಿಗೆ ಗೌರವ:
ಕಂಬಳ ಕರೆಯಲ್ಲಿ ಸಾಧನೆಗೈದ ಹಿರಿಯ ನಾಲ್ಕು ಕೋಣಗಳಾದ ಕೊಳಚೂರು ಕುಂಡೊಟ್ಟು ಸುಕುಮಾರ್ ಶೆಟ್ಟಿ ಅವರ ಯಜಮಾನತ್ವದ “ಚೆನ್ನ”, ನಂದಳಿಕೆ ಶ್ರೀಕಾಂತ್ ಭಟ್ ಅವರ ” ಪಾಂಡು”, ಬೋಳದಗುತ್ತು ಸತೀಶ್ ಶೆಟ್ಟಿ ಅವರ “ದೋಣಿ” ಹಾಗೂ ಇರುವೈಲು ಪಾನಿಲ ಬಾಡ ಪೂಜಾರಿ ಅವರ ಯಜಮಾನತ್ವದ “ತಾಟೆ” ಹೆಸರಿನ ಕೋಣಗಳಿಗೆ ಗೌರವದ ಸನ್ಮಾನ. ಕಂಬಳದಲ್ಲಿ ಭಾಗವಹಿಸುವ ಕೋಣಗಳ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವುದು.
ಕನೆ ಹಲಗೆ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಪ್ರಶಸ್ತಿ ಮಾತ್ರ ನೀಡಲಾಗುತ್ತಿದ್ದು, ಇನ್ನುಳಿದಂತೆ ಅಡ್ಡ ಹಲಗೆ ವಿಭಾಗ, ಹಗ್ಗದ ವಿಭಾಗದಲ್ಲಿ ಸೀನಿಯರ್ ಹಾಗೂ ಜೂನಿಯರ್, ನೇಗಿಲು ವಿಭಾಗದಲ್ಲಿ ಸೀನಿಯರ್ ಹಾಗೂ ಜೂನಿಯರ್ ಸ್ಪರ್ಧೆಯಲ್ಲಿ ಪ್ರಥಮ , ದ್ವಿತೀಯ, ತೃತೀಯ ಹಾಗೂ ಚತುರ್ಥ ಬಹುಮಾನ ನೀಡಿ ಪುರಸ್ಕರಿಸಲಾಗುವುದು.
ಮಹಿಳೆಯರಿಗಾಗಿ ಕ್ರೀಡಾಕೂಟ: ಜ. 15ರಂದು ಸೋಮವಾರ ಮಧ್ಯಾಹ್ನ‌ 3.00‌ ಗಂಟೆಯಿಂದ ಮಹಿಳೆಯರಿಗಾಗಿ ಹೊನಲು ಬೆಳಕಿನ ಕ್ರೀಡಾಕೂಟ ಜಿಲ್ಲಾ ಪಂಚಾಯಿತಿ ಮಾಜಿ‌ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ ಅವರ ನೇತೃತ್ವದಲ್ಲಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು