4:42 AM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಮಸ್ಕತ್ ವಾಹನ ಅಪಘಾತ: 25 ಲಕ್ಷ ಪರಿಹಾರ ಮಂಜೂರು; ಒಮಾನ್ ಸೋಶಿಯಲ್ ಫೋರಂ ಕಾನೂನು ಹೋರಾಟಕ್ಕೆ ಸಂದ ಜಯ

07/08/2021, 10:40

ಮಸ್ಕತ್ : ಒಮಾನ್ ನ ಮಬೇಲ ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಮೃತಪಟ್ಟ ನೂರ್ ಮುಹಮ್ಮದ್ ಕುಟುಂಬಕ್ಕೆ ಪರಿಹಾರ ಮೊತ್ತ ದೊರಕಿಸಿ ಕೊಡುವಲ್ಲಿ ಸೋಶಿಯಲ್ ಫೋರಮ್ ಒಮಾನ್ ಯಶಸ್ವಿಯಾಗಿದೆ.

2019ರ ಮೇ 11ರಂದು ವಾಹನ ಅಪಘಾತ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ನಿವಾಸಿ ನೂರ್ ಮುಹಮ್ಮದ್ (25) ಮತ್ತು ಚಾಲಕ ಒಮಾನ್ ಪ್ರಜೆ ಸ್ಥಳದಲ್ಲೇ ಮೃತಪಟ್ಟಿದ್ದರು. ನೂರ್ ಮುಹಮ್ಮದ್ ರ ಮೃತದೇಹವನ್ನು ಕೇವಲ ಎರಡು ದಿನಗಳಲ್ಲಿ ಸೋಶಿಯಲ್ ಫೋರಮ್ ಒಮಾನ್ ನೆರವಿನಿಂದ ಊರಿಗೆ ಕಳುಹಿಸಿಕೊಡಲಾಗಿತ್ತು.

ತೀರಾ ಬಡ ಕುಟುಂಬದ ಯುವಕ ನೂರ್ ಮುಹಮ್ಮದ್ ಅಪಾರ ಕನಸಿನೊಂದಿಗೆ ಮೊತ್ತಮೊದಲ ಬಾರಿಗೆ ಒಮಾನ್ ಗೆ ಬಂದಿದ್ದು ಮುಸನ್ನ ಎಂಬಲ್ಲಿನ ‘ಮಸ್ಕತ್ ವಾಟರ್’ ಬಾಟಲಿ ನೀರು ಕಂಪೆನಿಯಲ್ಲಿ ಸೇಲ್ಸ್ ಮನ್ ಆಗಿ ಉದ್ಯೋಗ ಸೇರಿಕೊಂಡಿದ್ದರು. 2019ರ ಮೇ 11ರಂದು ಕಂಪೆನಿಯ ವಾಹನವು ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಚಾಲಕ ಮತ್ತು ನೂರ್ ಮುಹಮ್ಮದ್ ಮೃತಪಟ್ಟಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತರಾದ ಸೋಶಿಯಲ್ ಫೋರಮ್ ಒಮಾನ್ ತಂಡವು ಅಪಘಾತದ ಪರಿಹಾರ ಮೊತ್ತಕ್ಕಾಗಿ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ನಿರಂತರ 2 ವರ್ಷಗಳ ಕಾನೂನು ಹೋರಾಟದ ಫಲವಾಗಿ  25 ಲಕ್ಷ ರೂಪಾಯಿ ಪರಿಹಾರ ಮೊತ್ತವು ಬಿಡುಗಡೆಯಾಗಿರುತ್ತದೆ. ಮೃತ ನೂರ್ ಮುಹಮ್ಮದ್ ರ ತಾಯಿ ಕೂಡ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದೀಗ ನೂರ್ ಮುಹಮ್ಮದ್ ರ ಕುಟುಂಬದಲ್ಲಿ ತಂದೆ, ಅಣ್ಣ, ಅಕ್ಕ ಇದ್ದಾರೆ. ಬಿಡುಗಡೆಗೊಂಡ ಪರಿಹಾರ ಮೊತ್ತವನ್ನು ಸೋಶಿಯಲ್ ಫೋರಮ್ ಒಮಾನ್ ಮೂಲಕ ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಕಾನೂನು  ಹೋರಾಟದಲ್ಲಿ ಮುಹಿಯುದ್ದೀನ್ ಗುರುವಾಯನಕೆರೆ, ಅಬ್ದುಲ್ ಹಮೀದ್ ಪಾಣೆಮಂಗಳೂರು, ಇರ್ಫಾನ್ ಉಜಿರೆ, ಆಸಿಫ್ ಬೈಲೂರು,  ಊರಿನ ಸ್ಥಳೀಯ ಗ್ರಾ.ಪಂ.ಸದಸ್ಯ ಮುಸ್ತಫಾ ಜಿ. ಕೆ.,  ರಿಹಾನ್ ಸಾಹೇಬ್ ಮುಂತಾದವರು ಸಹಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು