4:13 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಸ್ಕತ್ ವಾಹನ ಅಪಘಾತ: 25 ಲಕ್ಷ ಪರಿಹಾರ ಮಂಜೂರು; ಒಮಾನ್ ಸೋಶಿಯಲ್ ಫೋರಂ ಕಾನೂನು ಹೋರಾಟಕ್ಕೆ ಸಂದ ಜಯ

07/08/2021, 10:40

ಮಸ್ಕತ್ : ಒಮಾನ್ ನ ಮಬೇಲ ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಮೃತಪಟ್ಟ ನೂರ್ ಮುಹಮ್ಮದ್ ಕುಟುಂಬಕ್ಕೆ ಪರಿಹಾರ ಮೊತ್ತ ದೊರಕಿಸಿ ಕೊಡುವಲ್ಲಿ ಸೋಶಿಯಲ್ ಫೋರಮ್ ಒಮಾನ್ ಯಶಸ್ವಿಯಾಗಿದೆ.

2019ರ ಮೇ 11ರಂದು ವಾಹನ ಅಪಘಾತ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ನಿವಾಸಿ ನೂರ್ ಮುಹಮ್ಮದ್ (25) ಮತ್ತು ಚಾಲಕ ಒಮಾನ್ ಪ್ರಜೆ ಸ್ಥಳದಲ್ಲೇ ಮೃತಪಟ್ಟಿದ್ದರು. ನೂರ್ ಮುಹಮ್ಮದ್ ರ ಮೃತದೇಹವನ್ನು ಕೇವಲ ಎರಡು ದಿನಗಳಲ್ಲಿ ಸೋಶಿಯಲ್ ಫೋರಮ್ ಒಮಾನ್ ನೆರವಿನಿಂದ ಊರಿಗೆ ಕಳುಹಿಸಿಕೊಡಲಾಗಿತ್ತು.

ತೀರಾ ಬಡ ಕುಟುಂಬದ ಯುವಕ ನೂರ್ ಮುಹಮ್ಮದ್ ಅಪಾರ ಕನಸಿನೊಂದಿಗೆ ಮೊತ್ತಮೊದಲ ಬಾರಿಗೆ ಒಮಾನ್ ಗೆ ಬಂದಿದ್ದು ಮುಸನ್ನ ಎಂಬಲ್ಲಿನ ‘ಮಸ್ಕತ್ ವಾಟರ್’ ಬಾಟಲಿ ನೀರು ಕಂಪೆನಿಯಲ್ಲಿ ಸೇಲ್ಸ್ ಮನ್ ಆಗಿ ಉದ್ಯೋಗ ಸೇರಿಕೊಂಡಿದ್ದರು. 2019ರ ಮೇ 11ರಂದು ಕಂಪೆನಿಯ ವಾಹನವು ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಚಾಲಕ ಮತ್ತು ನೂರ್ ಮುಹಮ್ಮದ್ ಮೃತಪಟ್ಟಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತರಾದ ಸೋಶಿಯಲ್ ಫೋರಮ್ ಒಮಾನ್ ತಂಡವು ಅಪಘಾತದ ಪರಿಹಾರ ಮೊತ್ತಕ್ಕಾಗಿ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ನಿರಂತರ 2 ವರ್ಷಗಳ ಕಾನೂನು ಹೋರಾಟದ ಫಲವಾಗಿ  25 ಲಕ್ಷ ರೂಪಾಯಿ ಪರಿಹಾರ ಮೊತ್ತವು ಬಿಡುಗಡೆಯಾಗಿರುತ್ತದೆ. ಮೃತ ನೂರ್ ಮುಹಮ್ಮದ್ ರ ತಾಯಿ ಕೂಡ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದೀಗ ನೂರ್ ಮುಹಮ್ಮದ್ ರ ಕುಟುಂಬದಲ್ಲಿ ತಂದೆ, ಅಣ್ಣ, ಅಕ್ಕ ಇದ್ದಾರೆ. ಬಿಡುಗಡೆಗೊಂಡ ಪರಿಹಾರ ಮೊತ್ತವನ್ನು ಸೋಶಿಯಲ್ ಫೋರಮ್ ಒಮಾನ್ ಮೂಲಕ ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಕಾನೂನು  ಹೋರಾಟದಲ್ಲಿ ಮುಹಿಯುದ್ದೀನ್ ಗುರುವಾಯನಕೆರೆ, ಅಬ್ದುಲ್ ಹಮೀದ್ ಪಾಣೆಮಂಗಳೂರು, ಇರ್ಫಾನ್ ಉಜಿರೆ, ಆಸಿಫ್ ಬೈಲೂರು,  ಊರಿನ ಸ್ಥಳೀಯ ಗ್ರಾ.ಪಂ.ಸದಸ್ಯ ಮುಸ್ತಫಾ ಜಿ. ಕೆ.,  ರಿಹಾನ್ ಸಾಹೇಬ್ ಮುಂತಾದವರು ಸಹಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು