11:07 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ನಂಜನಗೂಡು: ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಸಭೆ ಮತ್ತು ದೂರು ಸ್ವೀಕಾರ

10/01/2024, 22:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಇಂದು ಸಾರ್ವಜನಿಕರ ಕುಂದು ಕೊರತೆ ಸಭೆ ಹಾಗೂ ದೂರು ಸ್ವೀಕಾರ ಕಾರ್ಯಕ್ರಮವನ್ನು ನಂಜನಗೂಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೊದಲಿಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಅಧಿಕಾರಿಗಳು ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಕಾರಣವಿಲ್ಲದೆ ವಿಳಂಬ ಮಾಡುವುದಾಗಲಿ ಕಚೇರಿಯಿಂದ ಕಚೇರಿಗೆ ಅಲೆಸುವುದಾಗಲಿ ಮಾಡದೆ ಪ್ರಾಮಾಣಿಕವಾಗಿ ಮಾಡಿಕೊಡಬೇಕು ಎಂದು ಎಚ್ಚರಿಸಿದರು.


ಸಾರ್ವಜನಿಕರು ಏನಾದರೂ ನಮಗೆ ದೂರು ನೀಡಿದರೆ ನಿಮಗೆ ಖಂಡಿತ ತೊಂದರೆಯಾಗುತ್ತದೆ. ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ಅಧಿಕಾರಿಗಳಿಗೆ ಸಾರ್ವಜನಿಕರ ಪರವಾಗಿ ಚಾಟಿ ಬೀಸಿದರು.
ಬಳಿಕ ಸಾರ್ವಜನಿಕರು ನೀಡಿದ ದೂರುಗಳನ್ನು ಸ್ವೀಕರಿಸಿ ಅವರ ಅಹವಾಲುಗಳನ್ನು ಕೇಳಿ ತಿಳಿದುಕೊಂಡು ಸ್ಥಳದಲ್ಲೇ ಇದ್ದ ಅಧಿಕಾರಿಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು.
ಜಮೀನುಗಳಿಗೆ ತೆರಳುವ ಸರ್ಕಾರಿ ಓಣಿ ಒತ್ತುವರಿ, ನಿವೇಶನಗಳ ಒತ್ತುವರಿ, ಆಶ್ರಯ ಮನೆಗಳಿಗೆ ಬಿಲ್ ಆಗದೇ ಇರುವುದು, ನಗರ ಸಭೆಯಲ್ಲಿ ಕಡತನಾಪತ್ತೆ ಹಾಗೂ ಖಾತೆ ಮಾಡಿಕೊಡುವುದರಲ್ಲಿ ಅಕ್ರಮ ವೆಸಗಿರುವ ಬಗ್ಗೆ ಸೇರಿದಂತೆ ಹಲವು ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ವಿಚಾರಣೆ ನಡೆಸಿ ಅವುಗಳನ್ನು ತಕ್ಷಣವೇ ಸರಿಪಡಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಇದೇ ಸಂದರ್ಭ ಇಲಾಖಾವಾರು ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಸಕಾಲದಲ್ಲಿ ವಿಲೇವಾರಿ ಆಗದಿರುವ ಅರ್ಜಿಗಳ ಬಗ್ಗೆ ಪ್ರಶ್ನಿಸಿ ಅವುಗಳನ್ನು ಕೂಡಲೇ ಇತ್ಯರ್ಥ ಪಡಿಸುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಕಚೇರಿ ಹಾಗೂ ಅಧಿಕಾರಿಗಳಿಂದ ಯಾವುದೇ ತೊಂದರೆ ಹಾಗೂ ವಿಳಂಬವಾಗಲಿ ನಮಗೆ ದೂರು ನೀಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸನೂರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಜೆರಾಲ್ಡ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕರುಗಳಾದ ಉಮೇಶ್, ಲೋಕೇಶ್, ರೂಪಶ್ರೀ, ರವಿಕುಮಾರ್ ಸಿಬ್ಬಂದಿಗಳಾದ ಗುರುಪ್ರಸಾದ್, ಮೋಹನ್ ಕುಮಾರ್, ಕಾಂತರಾಜು, ನೇತ್ರಾವತಿ ,ಶೇಖರ್, ಪರಶುರಾಮ್, ದಿನೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು