8:18 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮ ಪಾಲಿಸಬೇಕು: ಯೇನಪೊಯ ವಿವಿ ಕುಲಪತಿ ಡಾ. ವಿಜಯ ಕುಮಾರ್

11/01/2024, 20:41

ಮಂಗಳೂರು(reporterkarnataka.com): ನಮ್ಮಲ್ಲಿ ಪೊಲೀಸರ ಭಯ ಹೋಗಬೇಕಾದರೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಜೀವನದಲ್ಲಿ ಇಂತಹ ಶಿಸ್ತು ಪಾಲನೆ ಮಾಡಿದರೆ ಉತ್ತಮ ಸ್ಥಾನಕ್ಕೆ ಏರಲು ಸಾಧ್ಯವಿದೆ ಎಂದು ಯೇನಪೊಯ ವಿಶ್ವವಿದ್ಯಾನಿಲಯದ ಕುಲಪತಿ ಡಾ. ವಿಜಯಕುಮಾರ್ ಹೇಳಿದರು.

ಅವರು ಗುರುವಾರ ಮಂಗಳೂರು ನಗರ ಸಂಚಾರ ಪೊಲೀಸ್ ವಿಭಾಗದ ವತಿಯಿಂದ ಸಾರಿಗೆ ಇಲಾಖೆ – ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಸಹಯೋಗದಲ್ಲಿ ಡಾ. ಟಿಎಂಎ ಪೈ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2024 ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ize-medium wp-image-58505″ />
ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತೀ ವರ್ಷ ಸಂಚಾರ ಸುರಕ್ಷತಾ ಸಪ್ತಾಹ ಆಯೋಜಿಸಲಾಗುತ್ತಿದೆ. ಅಪಘಾತಗಳ ಸಂಖ್ಯೆ ಕಡಿಮೆ ಆಗಿದೆಯೇ ಎಂದು ನೋಡಿದರೆ ಇಲ್ಲ ಎನ್ನುವ ಉತ್ತರ ದೊರೆಯುತ್ತದೆ. ಕುಟುಂಬಕ್ಕೆ ನೆರವಾಗಬೇಕಾದ ವಯಸ್ಸಿನಲ್ಲಿ ಅಪಘಾತಕ್ಕೆ ಬಲಿಯಾಗುವುದು ನಿಜಕ್ಕೂ ದುರಂತ. ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ದುರಂತಗಳನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ ಎಂದರು.

ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಪಿ. ದಿನೇಶ್ ಕುಮಾರ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ನಗರದಲ್ಲಿ ಪ್ರತಿ ವರ್ಷ ೬೦೦-೮೦೦ ಅಪಘಾತಗಳು ಸಂಭವಿಸುತ್ತಿದ್ದು, ೮೦೦-೯೦೦ ಮಂದಿ ಗಾಯಾಳುಗಳಾದರೆ, ೧೦೦-೧೨೦ ಮಂದಿ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ವಾಹನ ಚಾಲನಾ ಮತ್ತು ರಸ್ತೆ ಬಳಕೆ ನಿಯಮಾವಳಿಗಳನ್ನು ತಿಳಿದುಕೊಳ್ಳಬೇಕಾದ ಅಗತ್ಯವಿದೆ ಎಂದರು.


ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಆರ್‌ಎಂಒ ಡಾ. ಸುಧಾಕರ್, ಸಿಎಆರ್ ಮಂಗಳೂರು ಪೊಲೀಸ್ ಉಪ ಆಯುಕ್ತ ಪಿ. ಉಮೇಶ್, ಸಾರಿಗೆ ಉಪ ಆಯುಕ್ತ ಹಾಗೂ ಹಿರಿಯ ಸಾರಿಗೆ ಅಽಕಾರಿ ಶ್ರೀಧರ್ ಕೆ.ಮಲ್ಲಾಡ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಕಜೆ, ಮಂಗಳೂರು ವಿಶ್ವ ವಿದ್ಯಾನಿಲಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ,ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ, ಸೇವಕಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸಂಚಾರ ವಿಭಾಗದ ಎಸಿಪಿ ಗೀತಾ ಕುಲಕರ್ಣಿ ಅವರು ರಸ್ತೆ ಸಂಚಾರದ ವೇಳೆ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಕ್ಕಳಿಗೆ ವಿವರಿಸಿದರು. ನಗರದಲ್ಲಿ ಸಂಚಾರ ನಿಯಂತ್ರಣಕ್ಕೆ ಸ್ವಯಂ ಪ್ರೇರಣೆಯಿಂದ ಶ್ರಮಿಸುತ್ತಿರುವ ಟ್ರಾಫಿಕ್ ವಾರ್ಡನ್‌ಗಳಾದ ಫ್ರಾನ್ಸಿಸ್ ಮೊರಾಸ್, ರೋಶನ್ ಸಿಕ್ವೇರಾ, ರಮೇಶ್ ಕಾವೂರು ಅವನ್ನು ಸಮ್ಮಾನಿಸಲಾಯಿತು. ಅತ್ಯುತ್ತಮ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬಂದಿಯವರಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.



ಮಂಗಳೂರು ದಕ್ಷಿಣ ಸಂಚಾರ ಠಾಣೆ ಇನ್ಸ್ ಪೆಕ್ಟರ್ ರಮೇಶ್ ಹಾನಾಪುರ ಸ್ವಾಗತಿಸಿದರು.


ಆರ್‌ಜೆ ಪ್ರಸನ್ನ ಮತ್ತು ಅಕ್ಷತಾ ಶೆಣೈ ‘ ಕಾರ್ಯಕ್ರಮ ನಿರೂಪಿಸಿದರು. ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್ ಅವರು ವಂದಿಸಿದರು. ಕಮಿಷನರೇಟ್ ವ್ಯಾಪ್ತಿಯ ವಿವಿಧ ಶಾಲೆ – ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು