12:29 PM Friday24 - April 2026
ಬ್ರೇಕಿಂಗ್ ನ್ಯೂಸ್
ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ…

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು