3:16 PM Saturday19 - July 2025
ಬ್ರೇಕಿಂಗ್ ನ್ಯೂಸ್
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,…

ಇತ್ತೀಚಿನ ಸುದ್ದಿ

ನಂಜನಗೂಡು: ರಾಮಜನ್ಮಭೂಮಿ ಅಯೋಧ್ಯೆಯಿಂದ ತಂದ ಮಂತ್ರಾಕ್ಷತೆ ಮನೆ ಮನೆಗೆ ವಿತರಣೆ

12/01/2024, 19:45

ಮೋಹನ್ ನಂಜನಗೂಡು ಮೈಸೂರು

info.reporterkarnatak@gmail.com
ಹಿಂದುಗಳ ಬಹು ನಿರೀಕ್ಷಿತ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಅಂಗವಾಗಿ ಜನವರಿ 22ರಂದು ಶ್ರೀ ಬಾಲರಾಮನ ಪ್ರತಿಷ್ಠಾಪನೆ ಹಾಗೂ ರಾಮ ಮಂದಿರ ಉದ್ಘಾಟನೆಯ ಪ್ರಯುಕ್ತ ಅಯೋಧ್ಯೆಯಿಂದ ತರಲಾದ ಮಂತ್ರಾಕ್ಷತೆಯನ್ನು ಇಂದು ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಹಾಗೂ ಹರತಲೆ ಗ್ರಾಮಗಳು ಸೇರಿದಂತೆ ವಿವಿಧಡೆ ವಿತರಣೆ ಮಾಡಲಾಯಿತು.


ಹೆಗ್ಗಡಹಳ್ಳಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಹರತಲೆ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಂತ್ರಾಕ್ಷತೆಗೆ ಪೂಜೆ ಸಲ್ಲಿಸಿದ ಬಳಿಕ ಮನೆ ಮನೆಗೆ ವಿತರಿಸುವ ಕಾರ್ಯಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು. ಪಕ್ಷದ ಹಾಗೂ ಗ್ರಾಮದ ಮುಖಂಡರ ಜತೆಗೂಡಿ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ವಿತರಿಸಿದರು.
ಮಂತ್ರಾಕ್ಷತೆ ವಿತರಿಸುವ ಸಂದರ್ಭ ಮಹಿಳೆಯರು ಮಂತ್ರಾಕ್ಷತೆಗೆ ದೀಪ ಬೆಳಗಿ ಪೂಜೆ ಸಲ್ಲಿಸಿ ಭಕ್ತಿ ಭಾವದೊಂದಿಗೆ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಂತ್ರಾಕ್ಷತೆ ವಿತರಣೆಗೆ ಬಂದ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಲಾಯಿತು.
ನಂತರ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಂಡಲ ಅಧ್ಯಕ್ಷ ಮಹೇಶ್ ಮಾತನಾಡಿ ಜನವರಿ 22ರಂದು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ಬಾಲರಾಮನ ಪ್ರತಿಷ್ಠಾಪನೆ ಅಂಗವಾಗಿ ಅಲ್ಲಿಂದ ಮಂತ್ರಾಕ್ಷತೆ ಕಳುಹಿಸಿ ಇಡೀ ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಅದರಂತೆ ಇಲ್ಲೂ ಕೂಡ ಯಾವುದೇ ಪಕ್ಷಾತೀತ,ಜಾತ್ಯತೀತ, ಧರ್ಮಾತೀತ ಎನ್ನದೆ ಎಲ್ಲಾ ಭಾರತೀಯರಿಗೂ ಈ ಮಂತ್ರಾಕ್ಷತೆಯನ್ನು ವಿತರಿಸಲಾಗುತ್ತದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಜಿಪಂ ಮಾಜಿ ಸದಸ್ಯ ಚಿಕ್ಕ ರಂಗನಾಯಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಪಂ ಮಾಜಿ ಸದಸ್ಯರುಗಳಾದ ಬಸವರಾಜು, ರವಿ ಗ್ರಾಪಂ ಅಧ್ಯಕ್ಷ ಮನೋಜ್ ಸದಸ್ಯ ಗೋವಿಂದರಾಜ್ ಮುಖಂಡರುಗಳಾದ ಸಂಜಯ್ , ದೊಡ್ಡಂಕಶೆಟ್ಟಿ,ಮಹದೇವಸ್ವಾಮಿ ,ಪುಟ್ಟಸ್ವಾಮಿ, ಮಹೇಶ್ ಬಾಬು, ಪ್ರಕಾಶ್, ಗಂಗಾಧರ್, ಚಂದ್ರು ಸೇರಿದಂತೆ ನೂರಾರು ಕಾರ್ಯಕರ್ತ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು