12:20 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ: ಸರಕಾರದಿಂದ ಆದೇಶ

07/08/2021, 20:03

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.

ರಾಜ್ಯಪಾಲರ ಆದೇಶದ ಮೇರೆಗೆ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಅಧೀನ ಕಾರ್ಯದರ್ಶಿ ರಾಜೇಶ್ ಶಂಕ್ರಪ್ಪ ಎಸ್. ಅವರು ಈ ಕುರಿತು ಆದೇಶ ನೀಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರವಧಿ ಇರುವ ತನಕ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸ್ಥಾನಮಾನ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಒಂದು ಕಡೆ ಪದೇ ಪದೇ  ಕೊರೊನಾ ಲಾಕ್ ಡೌನ್ ನಿಂದ ಜನರು ತತ್ತರಿಸಿ ಹೋಗಿದ್ದಾರೆ. ಕೆಲಸ, ವ್ಯಾಪಾರವಿಲ್ಲದೆ ಮೂರು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದಾರೆ. ಇನ್ನೊಂದು ಕಡೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಜನರು ಕಾಳಜಿ ಕೇಂದ್ರ ಸೇರಿದ್ದಾರೆ. ಮನೆ ಮಠ ಕಳೆದುಕೊಂಡವರಿಗೆ ಇನ್ನೂ ಸರಕಾರದಿಂದ ತಕ್ಕ ವ್ಯವಸ್ಥೆಯಾಗಿಲ್ಲ. ಕಳೆದ ವರ್ಷದ ಪ್ರವಾಹದಲ್ಲಿ ಸಂತ್ರಸ್ತರಾದವರಿಗೆ ಇನ್ನೂ ಪರಿಹಾರ ನೀಡಿಲ್ಲ. ಕೊರೊನಾ ಪ್ಯಾಕೇಜ್ ನಲ್ಲಿ ಘೋಷಿಸಿದ 2-3 ಸಾವಿರ ಕೂಡ ಹಲವರ ಕೈಸೇರಿಲ್ಲ. ಇವೆಲ್ಲದರ ನಡುವೆ ಹೊಸ ಸಚಿವರುಗಳು ಹಾರ-ತುರಾಯಿ ಹಾಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಸಚಿವ ಪದವಿ ಸಿಗದವರು ಅಧಿಕಾರಕ್ಕಾಗಿ ಕೈಹಿಚುಕಿಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ಸಿಕ್ಕಿದ ಖಾತೆ ಚೆನ್ನಾಗಿಲ್ಲ ಇನ್ನೂ ಹುಲುಸಾಗಿರುವ ಖಾತೆ ಬೇಕೆಂದು ಒದ್ದಾಡುತ್ತಿದ್ದಾರೆ. ಆದರೆ ಜನರು ಮಾತ್ರ ಮನೆ ಬಾಡಿಗೆ/ಮನೆ ಕಂತು, ಸಾಲದ ಕಂತು,ಅಂಗಡಿ ಬಾಡಿಗೆ, ಕರೆಂಟ್ ಬಿಲ್ ಕಟ್ಟಲಾಗದೆ ಒದ್ದಾಡುತ್ತಿದ್ದಾರೆ. ಈ ಜನಪ್ರತಿನಿಧಿಗಳು ಜನರ ಸೇವಕರೋ ಅಲ್ಲ, ಮಾಂಡಲಿಕರೋ ಎನ್ನುವುದು ಅರ್ಥವಾಗದೆ ಜನರು ಗೊಂದಲಕ್ಕೆ ಸಿಲುಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು