12:29 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಂಜನಗೂಡು: ಖತರ್ನಾಕ್ ಕಳ್ಳನ ಕೈಚಳಕ; ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳವು

15/01/2024, 23:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಖತರ್ನಾಕ್ ಕಳ್ಳನೊಬ್ಬ ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದೋಯ್ದಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ ನಲ್ಲಿ ನಡೆದಿದೆ.


ನಂಜನಗೂಡಿನ ಹೆಸರಾಂತ ಸುರುಚಿ ಉಪ್ಪಿನಕಾಯಿ ಮಾಲೀಕ ವಿಶ್ವಚೇತನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಪಟ್ಟಣದ ಕೆಂಪೇಗೌಡ ಬಡಾವಣಿಯ 3ನೇ ಕ್ರಾಸ್ ನಲ್ಲಿ ವಿಶ್ವಚೇತನ್ ಹಾಗೂ ಕುಟುಂಬ ದವರು ಬಾಡಿಗೆಗೆ ಮನೆ ಪಡೆದಿದ್ದರು. ವಾರಾಂತ್ಯ ಮಕ್ಕಳಿಗೆ ಶಾಲಾ ರಜೆ ಇದ್ದ ಕಾರಣ ಮನೆಗೆ ಬೀಗ ಹಾಕಿ ತಮ್ಮ ಫ್ಯಾಕ್ಟರಿ ಮನೆಗೆ ಹೋಗಿದ್ದರು ಎನ್ನಲಾಗಿದೆ.
ಹಾಗಾಗಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿರುವ ಕಳ್ಳ ತನ್ನ ಕೈ ಚಳಕ ತೋರಿ ಮನೆ ಬಾಗಿಲು ಮೀಟಿ ಒಳನುಗ್ಗಿ ಬೀರುವಿನಲ್ಲಿದ್ದ ಸುಮಾರು 200 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುತ್ತಾನೆ.
ವಿಷಯ ತಿಳಿದು ಪಟ್ಟಣ ಠಾಣ ಇನ್ಸ್ಪೆಕ್ಟರ್ ಬಸವರಾಜು ಪಿಎಸ್ಐ ಶಿವಣ್ಣ ಸೇರಿದಂತೆ ಸಿಬ್ಬಂದಿಗಳು ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ
ಮಾಲೀಕ ವಿಶ್ವಚೇತನ್ ಮಾತನಾಡಿ ಕಳ್ಳತನದ ಘಟನೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು