10:35 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ನಂಜನಗೂಡು: ಖತರ್ನಾಕ್ ಕಳ್ಳನ ಕೈಚಳಕ; ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳವು

15/01/2024, 23:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಖತರ್ನಾಕ್ ಕಳ್ಳನೊಬ್ಬ ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದೋಯ್ದಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ ನಲ್ಲಿ ನಡೆದಿದೆ.


ನಂಜನಗೂಡಿನ ಹೆಸರಾಂತ ಸುರುಚಿ ಉಪ್ಪಿನಕಾಯಿ ಮಾಲೀಕ ವಿಶ್ವಚೇತನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಪಟ್ಟಣದ ಕೆಂಪೇಗೌಡ ಬಡಾವಣಿಯ 3ನೇ ಕ್ರಾಸ್ ನಲ್ಲಿ ವಿಶ್ವಚೇತನ್ ಹಾಗೂ ಕುಟುಂಬ ದವರು ಬಾಡಿಗೆಗೆ ಮನೆ ಪಡೆದಿದ್ದರು. ವಾರಾಂತ್ಯ ಮಕ್ಕಳಿಗೆ ಶಾಲಾ ರಜೆ ಇದ್ದ ಕಾರಣ ಮನೆಗೆ ಬೀಗ ಹಾಕಿ ತಮ್ಮ ಫ್ಯಾಕ್ಟರಿ ಮನೆಗೆ ಹೋಗಿದ್ದರು ಎನ್ನಲಾಗಿದೆ.
ಹಾಗಾಗಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿರುವ ಕಳ್ಳ ತನ್ನ ಕೈ ಚಳಕ ತೋರಿ ಮನೆ ಬಾಗಿಲು ಮೀಟಿ ಒಳನುಗ್ಗಿ ಬೀರುವಿನಲ್ಲಿದ್ದ ಸುಮಾರು 200 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುತ್ತಾನೆ.
ವಿಷಯ ತಿಳಿದು ಪಟ್ಟಣ ಠಾಣ ಇನ್ಸ್ಪೆಕ್ಟರ್ ಬಸವರಾಜು ಪಿಎಸ್ಐ ಶಿವಣ್ಣ ಸೇರಿದಂತೆ ಸಿಬ್ಬಂದಿಗಳು ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ
ಮಾಲೀಕ ವಿಶ್ವಚೇತನ್ ಮಾತನಾಡಿ ಕಳ್ಳತನದ ಘಟನೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು