9:51 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಖತರ್ನಾಕ್ ಕಳ್ಳನ ಕೈಚಳಕ; ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳವು

15/01/2024, 23:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಖತರ್ನಾಕ್ ಕಳ್ಳನೊಬ್ಬ ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದೋಯ್ದಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ ನಲ್ಲಿ ನಡೆದಿದೆ.


ನಂಜನಗೂಡಿನ ಹೆಸರಾಂತ ಸುರುಚಿ ಉಪ್ಪಿನಕಾಯಿ ಮಾಲೀಕ ವಿಶ್ವಚೇತನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಪಟ್ಟಣದ ಕೆಂಪೇಗೌಡ ಬಡಾವಣಿಯ 3ನೇ ಕ್ರಾಸ್ ನಲ್ಲಿ ವಿಶ್ವಚೇತನ್ ಹಾಗೂ ಕುಟುಂಬ ದವರು ಬಾಡಿಗೆಗೆ ಮನೆ ಪಡೆದಿದ್ದರು. ವಾರಾಂತ್ಯ ಮಕ್ಕಳಿಗೆ ಶಾಲಾ ರಜೆ ಇದ್ದ ಕಾರಣ ಮನೆಗೆ ಬೀಗ ಹಾಕಿ ತಮ್ಮ ಫ್ಯಾಕ್ಟರಿ ಮನೆಗೆ ಹೋಗಿದ್ದರು ಎನ್ನಲಾಗಿದೆ.
ಹಾಗಾಗಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿರುವ ಕಳ್ಳ ತನ್ನ ಕೈ ಚಳಕ ತೋರಿ ಮನೆ ಬಾಗಿಲು ಮೀಟಿ ಒಳನುಗ್ಗಿ ಬೀರುವಿನಲ್ಲಿದ್ದ ಸುಮಾರು 200 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುತ್ತಾನೆ.
ವಿಷಯ ತಿಳಿದು ಪಟ್ಟಣ ಠಾಣ ಇನ್ಸ್ಪೆಕ್ಟರ್ ಬಸವರಾಜು ಪಿಎಸ್ಐ ಶಿವಣ್ಣ ಸೇರಿದಂತೆ ಸಿಬ್ಬಂದಿಗಳು ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ
ಮಾಲೀಕ ವಿಶ್ವಚೇತನ್ ಮಾತನಾಡಿ ಕಳ್ಳತನದ ಘಟನೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು