8:45 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು