8:14 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರು ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಆಚರಣೆ; ರಂಗಗೀತೆ, ಜಾನಪದ ಗೀತೆ ಗಾಯನ

16/01/2024, 17:23

ಮಂಗಳೂರು(reporterkarnataka com): ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣ ಸಮಿತಿ, ಭಾರತ ಜ್ಞಾನ ವಿಜ್ಞಾನ ಸಮಿತಿ ಮತ್ತು ಚಿಂತನ ಸಾಂಸ್ಕೃತಿಕ ಬಳಗದ ವತಿಯಿಂದ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಬಂಟ್ವಾಳದ ಮೂಡಂಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಅರವಿಂದ ಕುಡ್ಲ ಮತ್ತು ಬೈಕಂಪಾಡಿ ಸರ್ಕಾರಿ ಪ್ರೌಢ ಶಿಕ್ಷಣ ಶಾಲೆಯ ಶಿಕ್ಷಕರಾದ ಪ್ರೇಮನಾಥ್ ಆಚಾರ್ಯ ಅವರ ನೇತೃತ್ವದಲ್ಲಿ ಯುವ ಕಲಾವಿದರ ತಂಡ ಜಾಗೃತಿ ಗೀತೆಗಳು, ಜಾನಪದ ಗೀತೆ ಮತ್ತು ಲಾವಣಿಗಳ ಮೂಲಕ ವಿಚಾರಣಾಧೀನ ಖೈದಿಗಳ ಮನ ರಂಜಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರಾಗೃಹದ ಅಧೀಕ್ಷಕರಾದ ಓಬಳೇಶಪ್ಪ ಅವರು ವಹಿಸಿದರು. ವಿಚಾರಣಾಧೀನ ಖೈದಿಗಳ ಮನದಲ್ಲಿ ಪರಿವರ್ತನೆ ತಂದು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಇದೊಂದು ಅಪೂರ್ವ ಕಾರ್ಯಕ್ರಮ ಎಂದು ಓಬಳೇಶಪ್ಪ ಅವರು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಪ್ರಾಧಿಕಾರದಿಂದ ದೊರೆಯುವ ಕಾನೂನು ನೆರವಿನ ಬಗ್ಗೆ ವಿವರಿಸಿದರು.
ಕೆನರಾ ಹೈಸ್ಕೂಲ್ ಮತ್ತು ಸಂತ ಅಲೋಷಿಯಸ್ ಹೈಸ್ಕೂಲ್‌ನ ವಿದ್ಯಾರ್ಥಿಗಳೂ ರಂಗ ಗೀತೆಗಳು, ಜಾನಪದ ಗೀತೆಗಳನ್ನು ಹಾಡಿ ವಿಚಾರಣಾಧೀನ ಖೈದಿಗಳಲ್ಲಿ ಜಾಗೃತಿ ಮೂಡಿಸಿದರು.
ಹಬ್ಬದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖೈದಿಗಳೂ ಚಪ್ಪಾಳೆ ತಟ್ಟಿ, ಹಾಡಿಗೆ ದನಿಗೂಡಿಸಿ ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು