10:37 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ನಂಜನಗೂಡು: ಕಾಡುಪ್ರಾಣಿಗಳ ಬೇಟೆಗೆ ಇಟ್ಟಿದ ಸಿಡಿಮದ್ದು ತಂದ ಆಪತ್ತು; ಜಾನುವಾರು ಬಾಯಿ ಛಿದ್ರಛಿದ್ರಗೊಂಡು ಸ್ಥಳದಲ್ಲಿಯೇ ಸಾವು

16/01/2024, 18:40

*ಸ್ಥಳ ಪರಿಶೀಲನೆ ಮಾಡಿ ಕಿಡಿಗೇಡಿಗಳ ಬಂಧನಕ್ಕೆ ಬಲೆ ಬೀಸಿದ ಎ. ಎಸ್.ಪಿ. ಬಾಬು ಪಿಎಸ್ಐ ರಮೇಶ್ ಕರ್ಕಿ ಕಟ್ಟೆ ನೇತೃತ್ವದ ತಂಡ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಕಾಡು ಪ್ರಾಣಿಗಳ ಬೇಟೆಗಾಗಿ ಪೇಪರ್ ನಲ್ಲಿ ಸುತ್ತಿ ಇಡಲಾಗಿದ್ದ ಸಿಡಿಮದ್ದನ್ನ ತಿಂದ ಹಸು ಬಾಯಿ ಛಿದ್ರಗೊಂಡು ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪ ಇರುವ ಈರೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ.
ಮಹಾದೇವಯ್ಯ ಎಂಬುವರ ಕೃಷಿ ಜಮೀನಿನಲ್ಲಿ ಘಟನೆ ನಡೆದಿದ್ದು ಕಾಡು ಹಂದಿ ಸೇರಿದಂತೆ ವಿವಿಧ ಪ್ರಾಣಿಗಳ ಬೇಟೆಗಾಗಿ ಕೃಷಿ ಜಮೀನಿನಲ್ಲಿ ಕಿಡಿಗೇಡಿಗಳು ಸಿಡಿಮದ್ದನ್ನು ಬಚ್ಚಿಟ್ಟಿದ್ದಾರೆ. ತಿನ್ನುವ ಪದಾರ್ಥ ಇರಬಹುದೆಂದು ಹಸು ಬಾಯಿ ಹಾಕಿದಾಗ ಸಿಡಿಮದ್ದು ಸ್ಪೋಟಗೊಂಡು ಬಾಯಿ ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನಾ ಸ್ಥಳಕ್ಕೆ ಮೈಸೂರಿನ ಉಪ ಪೋಲೀಸ್ ವರಿಷ್ಠಾಧಿಕಾರಿ ಬಾಬು ನಂಜನಗೂಡು ಡಿವೈಎಸ್ಪಿ ಗೋವಿಂದರಾಜು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರ್ಕಿಕಟ್ಟೆ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಶ್ವಾನದಳ ಮೂಲಕ ಸ್ಥಳ ಪರಿಶೀಲನೆ ಮಾಡಿ ಕಿಡಿಗೇಡಿಗಳ ಬಂಧನಕ್ಕೆ ಜಾಲ ಬೀಸಿದ್ದಾರೆ.


ಈ ಕುರಿತು ಮೈಸೂರು ಉಪ ಪೊಲೀಸ್ ವರಿಷ್ಠಾಧಿಕಾರಿ ಬಾಬು ಮಾತನಾಡಿ, ನಾವು ಈಗಾಗಲೇ ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದ್ದೇವೆ. ಜಾನುವಾರು ಕಳೆದುಕೊಂಡ ಮಾಲೀಕರು ಮತ್ತು ಇತರರ ಜೊತೆ ನಾವು ಮಾತನಾಡಿದ್ದೇವೆ. ಕಿಡಿಗೇಡಿಗಳ ಬಂಧನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂತಹ ಅವಘಡ ಸಂಭವಿಸಿರುವುದು ಇದೇ ಮೊದಲು. ಕಿಡಿಗೇಡಿಗಳು ಕಾಡುಪ್ರಾಣಿಗಳ ಭೇಟಿಗಾಗಿ ಇಂತಹ ಕೃತ್ಯವ್ಯಸಗಿದ್ದಾರೆ. ಆದರೆ ಇಲ್ಲಿ ಸಾಕು ಪ್ರಾಣಿ ಜಾನುವಾರು ಬಲಿಯಾಗಿದೆ ಕೂಡಲೇ ತಪ್ಪಿತಸ್ಥರನ್ನು ಬಂಧಿಸಲು ನಾವು ಮುಂದಾಗುತ್ತೇವೆ ಎಂದು ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ ಐ ರಮೇಶ್ ಕರ್ಕಿ ಕಟ್ಟೆ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು