4:29 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೂಡ್ಲಿಗಿಯಲ್ಲಿ ಗ್ಯಾಸ್ ಏಜೆನ್ಸಿಗಳಿಂದ ಹಗಲು ದರೋಡೆ: ಅಡುಗೆ ಅನಿಲ ಸಿಲಿಂಡರ್ ಗೆ 100 ರೂ. ಹೆಚ್ಚು ಹಣ ವಸೂಲಿ; ತಹಶೀಲ್ದಾರರಿಗೆ ದೂರು

18/01/2024, 10:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆಗಳಲ್ಲಿ, ಅಡಿಗೆ ಅನಿಲ ಸಿಲಿಂಡರ್ ವಿತರಕರು ಹಾಗೂ ಏಜೆಂಟರು ಅಡುಗೆ ಅನಿಲ ಸಿಲಿಂಡರ್ ಗ್ರಾಹಕರಿಂದ ವಿತರಣೆ ಸಂದರ್ಭದಲ್ಲಿ, ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ 100 ಅಧಿಕ ಹಣ ವಸೂಲಿ ಮಾಡಲಾಗುತ್ತಿದ್ದಾರೆಂದು. ಅಂತಹ ವಿತರಕರ ವಿರುದ್ಧ ಹಾಗೂ ಏಜೆಂನ್ಸಿಯವರ ವಿರುದ್ಧ, ಕಾನೂನು ರೀತ್ಯ ಅಗತ್ಯ ಶಿಸ್ತು ಕ್ರಮ ಜರುಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಜಿಲ್ಲಾ ಘಟಕ ದೂರಿದೆ.


ಆಯೋಗದ ಜಿಲ್ಲಾ ಘಟಕದ ಉಪಾಧ್ಯಕ್ಷ ಗುನ್ನಳ್ಳಿ ಶ್ರೀಧರವರ ನೇತೃತ್ವದಲ್ಲಿ, ಆಯೋಗದ ಪದಾಧಿಕಾರಿಗಳು ತಹಶಿಲ್ದಾರರಾದ ಎಂ. ರೇಣುಕಮ್ಮ ಅವರಿಗೆ ತಪಿತಸ್ಥರ ವಿರುದ್ಧ ಸೂಕ್ತ ಶಿಸ್ಥು ಕ್ರಮಕ್ಕಾಗಿ ಒತ್ತಾಯಿಸಿ, ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಡ್ಡದ ರಾಜು, ಮಂಜು, ಸುರೇಂದ್ರ, ರಾಘವೇಂದ್ರ ಸೇರಿದಂತೆ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು