2:22 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಸರಕಾರಿ ಕಟ್ಟಡಗಳ ದಾಖಲೆಗಳನ್ನು ಕ್ರಮಬದ್ಧಗೊಳಿಸಿ: ಪ್ರಗತಿ ಪರಿಶೀಲನಾ ಸಭೆ ಕೋಲಾರ ಜಿಲ್ಲಾಧಿಕಾರಿ ಸಲಹೆ

18/01/2024, 10:37

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com
ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ಶಾಶ್ವತ ಜ್ಞಾಪಿಕೆಗಳು ಅವುಗಳನ್ನು ಜತನದಿಂದ ಮುಂದಿನ ಪೀಳಿಗೆಗೆ ತಲುಪಿಸಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಸರ್ಕಾರವು ಅಂಗನವಾಡಿ ಹಾಗೂ ಶಾಲಾ ಕೊಠಡಿಗಳನ್ನು ಕಟ್ಟಿಸಿ ಕೊಡುತ್ತದೆ. ಆದರೆ ಆ ಕಟ್ಟಡಗಳ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಿಲ್ಲ. ಜಿಲ್ಲೆಯ ಬಹುಪಾಲು ಶಾಲಾ ಕಟ್ಟಡಗಳಿಗೆ ಖಾತೆ ಮಾಡಿಕೊಡಲಾಗುತ್ತಿದೆ. ಎಲ್ಲ ಶಾಲೆಗಳು ಈ ಪ್ರಯೋಜನ ಪಡೆಯಬೇಕು. ವಿವಾದಗಳಿರುವ ಕಟ್ಟಡಗಳಿಗೆ ಸ್ಥಳೀಯ ಪ್ರಾಧಿಕಾರದಲ್ಲಿ ಶೀಘ್ರವಾಗಿ ಬಗೆಹರಿಸಲು ಈಗಾಗಲೇ ಸಂಬಂದಿಸಿದ ಅಧಿಕಾರಿಗಳಿಗೆ ನಿರ್ದೇಶಸಲಾಗಿದೆ ಎಂದರು.
ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಿಂದ ಸ್ಥಳೀಯ ಶಾಲೆಗಳ ಆವರಣದಲ್ಲಿ ನಡೆಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದರು. ಸಮುದಾಯ ಭವನಗಳು ಬಹುತೇಕ ವರ್ಷವಿಡೀ ಖಾಲಿ ಇರುತ್ತವೆ. ಸಮುದಾಯದ ಮುಖಂಡರನ್ನು ಸಂಪರ್ಕಿಸಿ ಆ ಕಟ್ಟಡಗಳಲ್ಲಿಯೂ ಸಹ ಅಂಗನವಾಡಿ ಕೇಂದ್ರಗಳನ್ನು ವರ್ಗಾಯಿಸಬಹುದು. ಎಲ್ಲದಕ್ಕೂ ಇಚ್ಚಾಶಕ್ತಿ ಇರಬೇಕು ಎಂದು ತಿಳಿಸಿದರು.
ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 2023-24 ನೇ ಸಾಲಿನಲ್ಲಿ ಒಟ್ಟು 94 ಪ್ರಕರಣಗಳು ದಾಖಲಾಗಿದ್ದು ಅವುಗಳಲ್ಲಿ 78 ಪ್ರಕರಣಗಳು ಇಥ್ಯರ್ಥ ಗೊಂಡಿರುತ್ತವೆ. 16 ಪ್ರಕರಣಗಳು ಬಾಕಿ ಇವೆ.


ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 6 ಸಖಿ ಒನ್ ಸ್ಟಾಪ್ ಸೆಂಟರ್ ಗಳಲ್ಲಿ ಏಪ್ರಿಲ್ ಯಿಂದ ಡಿಸೇಂಬರ್ 2023ರವರೆಗೆ167 ವಿವಿಧ ಬಗೆಯ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 61 ಪ್ರಕರಣಗಳು ನ್ಯಾಯಾಲಯದಲ್ಲಿವೆ. ಪೊಲೀಸ್ ಠಾಣೆ ಗಳಲ್ಲಿ 7 ಹಾಗೂ ಇಥ್ಯರ್ಥ ಮಾಡಿದ ಪ್ರಕರಣಗಳು 90 ಆಗಿವೆ.
ಮಾಲೂರಿನಲ್ಲಿ ಸ್ಥಾಪಿಸಲಾದ ಸ್ವಾಧಾರಗೃಹ ದಲ್ಲಿ ಪ್ರಸಕ್ತ ಸಾಲಿನಲ್ಲಿ 49 ಮಹಿಳಾ ಮತ್ತು ಮಕ್ಕಳನ್ನು ದಾಖಲು ಮಾಡಿಕೊಳ್ಳಲಾಗಿದೆ.
ಒಟ್ಟು 69 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು 7 ಪ್ರಕರಣಗಳನ್ನು ತಡೆದು ಸಂಬಂಧಿಸಿದ ಠಾಣೆಗಳಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
ರಾಷ್ಟ್ರೀಯ ಪೋಷಣೆ ಅಭಿಯಾನದಡಿ ಜಿಲ್ಲೆಯ ಅರ್ಹ ಶೇ 98.8 ಫಲಾನುಭವಿಗಳ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲಾಗಿದೆ.
ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಶೇ 91.26 ರಷ್ಟು ಪ್ರಗತಿ ಸಾಧಿಸಲಾಗಿದೆ.
ಎಲ್ಲ ಸಿಡಿಪಿಒಗಳು ತಮ್ಮ ಕ್ಷೇತ್ರ ವ್ಯಾಪ್ತಿಯ ಕಾಲೇಜುಗಳಲ್ಲಿ ಮೇಲಿನ ಎಲ್ಲ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸಲು ಸೂಚಿಸಿದರು.
ಬಾಲ್ಯ ವಿವಾಹ ಕಾಯ್ದೆ ಬಗ್ಗೆ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್ ಹೊಸಮನಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಎಂ. ನಾರಾಯಣ ಸ್ವಾಮಿ,ಎಲ್ಲ ಸಿ ಡಿ ಪಿ ಓ ಗಳು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು