7:01 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮಹಿಳೆ ಮತ್ತು ಕಾನೂನು ಹಾಗೂ ಮಹಿಳೆಯರಿಗಾಗಿ ಮಾನಸಿಕ ಆರೋಗ್ಯದ ಕುರಿತು ಕಾನೂನು ಅರಿವು ನೆರವು

18/01/2024, 15:29

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ: ಜ18 ನ್ಯಾಯಾಲಯದ ಆವರಣದಲ್ಲಿ, ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ, ತಾಲ್ಲೂಕು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ. ಮಹಿಳೆ ಮತ್ತು ಕಾನೂನು ಹಾಗೂ ಮಹಿಳೆಯರಿಗಾಗಿ ಮಾನಸಿಕ ಆರೋಗ್ಯದ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಜರುಗಿತು. ಸಿವಿಲ್ ನ್ಯಾಯಾಧೀಶರಾದ ಸಿ.ಮಹಾಲಕ್ಷ್ಮೀ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಸಪೇಟೆಯ ಸಾರ್ವಜನಿಕ ಆಸ್ಪತ್ರೆಯ ಮಾನಸಿಕ ವೈದ್ಯ ತಜ್ಞರ‍ಾದ ಕೆ.ಸಿ.ಕಾವ್ಯ ಹಾಗೂ ಜಿ.ಮಾರೇಶ ರವರು, ಮಾನಸಿಕ ಆರೋಗ್ಯ ಕುರಿತು ಉಪನ್ಯಾಸ ನೀಡಿದರು. ಪ್ರಭಾರ ಸಿಡಿಪಿಒ ಶ್ರೀಮತಿ ಮಾಲಂಬಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಸಹಾಯಕ ಅಭಿಯೋಜಕರಾದ ವೈ.ಶಿಲ್ಪ, ವಕೀಲರ ಸಂಘದ ಉಪಾಧ್ಯಕ್ಷ ಹೆಚ್.ವೆಂಕಟೇಶ, ಹಿರಿಯ ಮಹಿಳಾ ನ್ಯಾಯವಾದಿ ಕೆ.ಎಚ್.ಎಂ. ಶೈಲಜಾ ಮಾತನಾಡಿದರು. ಪ್ಯಾನಲ್ ವಕೀಲರಾದ ಜಯಮ್ಮ ನಿರೂಪಿಸಿದರು. ವಕೀಲರಾದ ಟಿ.ರಮೇಶ ಸ್ವಾಗತಿಸಿ ವಂದಿಸಿದರು. ಸಿಡಿಪಿಒ ಇಲಾಖೆಯ ವಿವಿದ ಅಧಿಕಾರಿಗಳು ಉಪಸ್ಥಿತರಿದ್ದರು.


ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾಕಾರ್ಯಕರ್ತೆಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವಿವಿದ ಇಲಾಖೆಗಳ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು